<p><strong>ಕಲಬುರಗಿ:</strong> ಪಿಕಪ್ ವಾನಹದಲ್ಲಿ ಅನಧಿಕೃತವಾಗಿ ಸಾಗಣೆ ಮಾಡುತ್ತಿದ್ದ ₹1.41 ಲಕ್ಷ ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<p>ಆಳಂದ್ ಚೆಕ್ಪೋಸ್ಟ್ ಮಾರ್ಗವಾಗಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.</p>.<p>₹1.41 ಲಕ್ಷ ಮೌಲ್ಯದ 43 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ₹ 6 ಲಕ್ಷ ಮೌಲ್ಯದ ಪಿಕಪ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಚಾಲಕ ಕಿರಣ ತಿಮ್ಮಣ್ಣ, ಅಕ್ಕಿಯ ಮಾಲೀಕ ಸಂತೋಷಗೌಡ ಹಾಗೂ ಕೃಷ್ಣ ಲಾತೂರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಜಾತ್ರೆಯಲ್ಲಿ ಕಳ್ಳರ ಕೈಚಳಕ: ಐವರ ಚಿನ್ನಾಭರಣ ಕಳವು</strong></p>.<p>ಶರಣಬಸವೇಶ್ವರರ ಜಾತ್ರೆಯ ರಥೋತ್ಸವದ ವೇಳೆ ಕಳ್ಳರು ತಮ್ಮ ಕರಾಮತ್ತು ತೋರಿದ್ದು, ₹1.82 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕದ್ದಿದ್ದಾರೆ.</p>.<p>ರಥೋತ್ಸವದ ಜನಜಂಗುಳಿ ನಡುವೆ ಮಹಾದೇವಪ್ಪ ಸಿದ್ದಣ್ಣ ಅವರ ಕೊರಳಲ್ಲಿದ್ದ ₹45 ಸಾವಿರ ಮೌಲ್ಯದ ಚಿನ್ನದ ಸರ, ಡಾ. ಉಮೇಶಚಂದ್ರ ಗುರುಗುಂಟಿ ಅವರ ₹75 ಸಾವಿರ ಮೌಲ್ಯದ ಚೈನ್, ನಾಗಮ್ಮ ಬಸವರಾಜ ಅವರ ಕೊರಳಲ್ಲಿದ್ದ ತಾಳಿ ಸೇರಿ ₹20 ಸಾವಿರ ಮೌಲ್ಯದ ಚಿನ್ನಾಭರಣ, ಸೌಭಾಗ್ಯ ಯಾದವ ಅವರ ಕೊರಳಿಂದ 10 ಗ್ರಾಂ. ಚಿನ್ನದ ತಾಳಿ ಹಾಗೂ ವಿಠ್ಠಲ ಬಿರಾದಾರ ಅವರಿಂದ ₹22 ಸಾವಿರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.</p>.<p>ಈ ಸಂಬಂಧ ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಪಿಕಪ್ ವಾನಹದಲ್ಲಿ ಅನಧಿಕೃತವಾಗಿ ಸಾಗಣೆ ಮಾಡುತ್ತಿದ್ದ ₹1.41 ಲಕ್ಷ ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<p>ಆಳಂದ್ ಚೆಕ್ಪೋಸ್ಟ್ ಮಾರ್ಗವಾಗಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.</p>.<p>₹1.41 ಲಕ್ಷ ಮೌಲ್ಯದ 43 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ₹ 6 ಲಕ್ಷ ಮೌಲ್ಯದ ಪಿಕಪ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಚಾಲಕ ಕಿರಣ ತಿಮ್ಮಣ್ಣ, ಅಕ್ಕಿಯ ಮಾಲೀಕ ಸಂತೋಷಗೌಡ ಹಾಗೂ ಕೃಷ್ಣ ಲಾತೂರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಜಾತ್ರೆಯಲ್ಲಿ ಕಳ್ಳರ ಕೈಚಳಕ: ಐವರ ಚಿನ್ನಾಭರಣ ಕಳವು</strong></p>.<p>ಶರಣಬಸವೇಶ್ವರರ ಜಾತ್ರೆಯ ರಥೋತ್ಸವದ ವೇಳೆ ಕಳ್ಳರು ತಮ್ಮ ಕರಾಮತ್ತು ತೋರಿದ್ದು, ₹1.82 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕದ್ದಿದ್ದಾರೆ.</p>.<p>ರಥೋತ್ಸವದ ಜನಜಂಗುಳಿ ನಡುವೆ ಮಹಾದೇವಪ್ಪ ಸಿದ್ದಣ್ಣ ಅವರ ಕೊರಳಲ್ಲಿದ್ದ ₹45 ಸಾವಿರ ಮೌಲ್ಯದ ಚಿನ್ನದ ಸರ, ಡಾ. ಉಮೇಶಚಂದ್ರ ಗುರುಗುಂಟಿ ಅವರ ₹75 ಸಾವಿರ ಮೌಲ್ಯದ ಚೈನ್, ನಾಗಮ್ಮ ಬಸವರಾಜ ಅವರ ಕೊರಳಲ್ಲಿದ್ದ ತಾಳಿ ಸೇರಿ ₹20 ಸಾವಿರ ಮೌಲ್ಯದ ಚಿನ್ನಾಭರಣ, ಸೌಭಾಗ್ಯ ಯಾದವ ಅವರ ಕೊರಳಿಂದ 10 ಗ್ರಾಂ. ಚಿನ್ನದ ತಾಳಿ ಹಾಗೂ ವಿಠ್ಠಲ ಬಿರಾದಾರ ಅವರಿಂದ ₹22 ಸಾವಿರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.</p>.<p>ಈ ಸಂಬಂಧ ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>