<p><strong>ಕಲಬುರಗಿ:</strong> ‘ರೆಡ್ಡಿ ಸಮಾಜ ಎಲ್ಲರಿಗೂ ಆಶ್ರಯ ನೀಡುತ್ತದೆ. ಅದು ಎಲ್ಲ ಸಮಾಜಗಳಿಗೂ ಆಲದ ಮರವಿದ್ದಂತೆ’ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅಭಿಪ್ರಾಯಪಟ್ಟರು.</p>.<p>ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ ಶನಿವಾರ ನಡೆದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಮಲ್ಲಮ್ಮನವರು ಮಹಾಶರಣೆಯಾಗಿದ್ದರು. ಮಾನವ ಕುಲದಲ್ಲಿಯೇ ಸಮಾಜದ ಏಳಿಗೆ ಬಯಸಿದ ಮೊದಲಿಗರು’ ಎಂದರು.</p>.<p>‘ಮಲ್ಲಮ್ಮನವರು ಹೆಣ್ಣು ಕುಲಕ್ಕೆ ಮಾದರಿಯಾಗಿದ್ದರು. ಅವರ ತತ್ವಾದರ್ಶಗಳನ್ನು ತಿಳಿದುಕೊಳ್ಳಬೇಕು. ಅವರ ಬದುಕು ನಮಗೆ ದಾರಿದೀಪವಾಗಬೇಕು. ರಡ್ಡಿ ಸಮಾಜ ಶಕ್ತಿಯುತವಾದ ಸಮಾಜವಾಗಿದೆ. ಸಮಾಜದವರು ಒಗ್ಗಟ್ಟಾಗಿ ಹಕ್ಕು, ಸೌಲಭ್ಯಗಳನ್ನು ಪಡೆದುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ‘ಮಹನೀಯರನ್ನು ಸ್ಮರಿಸಲು ಜಯಂತಿಗಳನ್ನು ಆಚರಿಸಲಾಗುತ್ತದೆ. ಮಹನೀಯರ ವಿಚಾರ ಹಾಗೂ ಅವರ ಬದುಕನ್ನು ಮುಂದಿನ ಪೀಳಿಗೆಗೆ ದಾಟಿಸುವ ಉದ್ದೇಶವೂ ಜಯಂತಿ ಆಚರಣೆಯ ಕಾರಣಗಳಲ್ಲಿ ಒಂದಾಗಿದೆ’ ಎಂದರು.</p>.<p>‘ಮಲ್ಲಮ್ಮನವರ ಬದುಕು ಸಂಘರ್ಷದಿಂದ ಕೂಡಿತ್ತು. ಅವರು ಕಷ್ಟ ಕೊಟ್ಟವರಿಗೂ ಒಳ್ಳೆಯದನ್ನೇ ಬಯಸಿದರು. ಅದಕ್ಕಾಗಿಯೇ ಶ್ರೀಶೈಲದ ಮಲ್ಲಿಕಾರ್ಜುನ ದೇವರ ಸಾಕ್ಷಾತ್ಕಾರವಾಯಿತು. ದೇವರ ಎದುರಿಗೂ ಅವರು ಸಮಾಜಕ್ಕೆ ಒಳಿತಾಗುವ ವರವನ್ನೇ ಕೇಳಿದರು. ಅವರ ವಿಚಾರಗಳ ದಾರಿಯಲ್ಲಿಯೇ ಸಾಗಬೇಕು’ ಎಂದು ಹೇಳಿದರು.</p>.<p>‘ದುಶ್ಚಟಗಳಿಗೆ ಬಲಿಯಾದ ತನ್ನ ಮೈದುನ ಮೇಮನನ್ನು ಪರಿವರ್ತಿಸಿ ತತ್ವಜ್ಞಾನಿಯನ್ನಾಗಿ ಮಾಡಿದ ಕೀರ್ತಿ ಮಲ್ಲಮ್ಮನವರಿಗೆ ಸಲ್ಲುತ್ತದೆ’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಮಾತನಾಡಿ,‘ಮಲ್ಲಮ್ಮನವರ ದಾನದ ಗುಣ ಮಾದರಿಯಾಗಬೇಕು. ಅವರ ದಾನದ ಪರಂಪರೆಯನ್ನು ಮುಂದುವರಿಸಬೇಕು. ಸಮಾಜದ ಏಳಿಗೆ ಎಲ್ಲರ ಜವಾಬ್ದಾರಿಯಾಗಬೇಕು. ಸಮಾಜವನ್ನು ಬೆಳೆಸಬೇಕು’ ಎಂದು ಹೇಳಿದರು.</p>.<p>ರಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಡಾ.ಶರಣಬಸಪ್ಪ ಬಿ.ಕಾಮರಡ್ಡಿ ಮಾತನಾಡಿ, ‘ಮಲ್ಲಮ್ಮ ಎಲ್ಲ ಸಮಾಜಕ್ಕೂ ಮಾದರಿಯಾಗಿದ್ದಾರೆ. ಅವರನ್ನು ಒಂದು ಸಮಾಜಕ್ಕೆ ಸೀಮಿತಗೊಳಿಸಬಾರದು. ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಅಖಿಲ ಕರ್ನಾಟಕ ಹೇಮರಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆಯ ರಾಜ್ಯ ಘಟಕದ ಅಧ್ಯಕ್ಷೆ ವಿಶಾಲಾಕ್ಷಿ ಕರಡ್ಡಿ ಉಪನ್ಯಾಸ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಕರಾಟೆ ಸ್ಪರ್ಧೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಂಚಿನ ಪದಕ ಪಡೆದ ಶರಣರೆಡ್ಡಿ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ಲೋಕೋಪಯೋಗಿ ಇಲಾಖೆಯ ಎಇಇ ವಿ.ಎಸ್.ಸೂಗರೆಡ್ಡಿ ಅವರನ್ನು ಸನ್ಮಾನಿಸಲಾಯಿತು. </p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಮಾಜ ಹಿರಿಯರಾದ ಭಾಗನಗೌಡ ಸಂಕನೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸೇರಿ ಹಲವರು ಹಾಜರಿದ್ದರು.</p>.<p>ಜಿ.ಜಿ.ವಣಿಕ್ಯಾಳ ನಿರೂಪಿಸಿದರು. ಶೇಖರ್ ನಾಲವಾರ ಸ್ವಾಗತಿಸಿದರು. ಮುಖಂಡ ಮಹೇಶರೆಡ್ಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ರೆಡ್ಡಿ ಸಮಾಜ ಎಲ್ಲರಿಗೂ ಆಶ್ರಯ ನೀಡುತ್ತದೆ. ಅದು ಎಲ್ಲ ಸಮಾಜಗಳಿಗೂ ಆಲದ ಮರವಿದ್ದಂತೆ’ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅಭಿಪ್ರಾಯಪಟ್ಟರು.</p>.<p>ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ ಶನಿವಾರ ನಡೆದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಮಲ್ಲಮ್ಮನವರು ಮಹಾಶರಣೆಯಾಗಿದ್ದರು. ಮಾನವ ಕುಲದಲ್ಲಿಯೇ ಸಮಾಜದ ಏಳಿಗೆ ಬಯಸಿದ ಮೊದಲಿಗರು’ ಎಂದರು.</p>.<p>‘ಮಲ್ಲಮ್ಮನವರು ಹೆಣ್ಣು ಕುಲಕ್ಕೆ ಮಾದರಿಯಾಗಿದ್ದರು. ಅವರ ತತ್ವಾದರ್ಶಗಳನ್ನು ತಿಳಿದುಕೊಳ್ಳಬೇಕು. ಅವರ ಬದುಕು ನಮಗೆ ದಾರಿದೀಪವಾಗಬೇಕು. ರಡ್ಡಿ ಸಮಾಜ ಶಕ್ತಿಯುತವಾದ ಸಮಾಜವಾಗಿದೆ. ಸಮಾಜದವರು ಒಗ್ಗಟ್ಟಾಗಿ ಹಕ್ಕು, ಸೌಲಭ್ಯಗಳನ್ನು ಪಡೆದುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ‘ಮಹನೀಯರನ್ನು ಸ್ಮರಿಸಲು ಜಯಂತಿಗಳನ್ನು ಆಚರಿಸಲಾಗುತ್ತದೆ. ಮಹನೀಯರ ವಿಚಾರ ಹಾಗೂ ಅವರ ಬದುಕನ್ನು ಮುಂದಿನ ಪೀಳಿಗೆಗೆ ದಾಟಿಸುವ ಉದ್ದೇಶವೂ ಜಯಂತಿ ಆಚರಣೆಯ ಕಾರಣಗಳಲ್ಲಿ ಒಂದಾಗಿದೆ’ ಎಂದರು.</p>.<p>‘ಮಲ್ಲಮ್ಮನವರ ಬದುಕು ಸಂಘರ್ಷದಿಂದ ಕೂಡಿತ್ತು. ಅವರು ಕಷ್ಟ ಕೊಟ್ಟವರಿಗೂ ಒಳ್ಳೆಯದನ್ನೇ ಬಯಸಿದರು. ಅದಕ್ಕಾಗಿಯೇ ಶ್ರೀಶೈಲದ ಮಲ್ಲಿಕಾರ್ಜುನ ದೇವರ ಸಾಕ್ಷಾತ್ಕಾರವಾಯಿತು. ದೇವರ ಎದುರಿಗೂ ಅವರು ಸಮಾಜಕ್ಕೆ ಒಳಿತಾಗುವ ವರವನ್ನೇ ಕೇಳಿದರು. ಅವರ ವಿಚಾರಗಳ ದಾರಿಯಲ್ಲಿಯೇ ಸಾಗಬೇಕು’ ಎಂದು ಹೇಳಿದರು.</p>.<p>‘ದುಶ್ಚಟಗಳಿಗೆ ಬಲಿಯಾದ ತನ್ನ ಮೈದುನ ಮೇಮನನ್ನು ಪರಿವರ್ತಿಸಿ ತತ್ವಜ್ಞಾನಿಯನ್ನಾಗಿ ಮಾಡಿದ ಕೀರ್ತಿ ಮಲ್ಲಮ್ಮನವರಿಗೆ ಸಲ್ಲುತ್ತದೆ’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಮಾತನಾಡಿ,‘ಮಲ್ಲಮ್ಮನವರ ದಾನದ ಗುಣ ಮಾದರಿಯಾಗಬೇಕು. ಅವರ ದಾನದ ಪರಂಪರೆಯನ್ನು ಮುಂದುವರಿಸಬೇಕು. ಸಮಾಜದ ಏಳಿಗೆ ಎಲ್ಲರ ಜವಾಬ್ದಾರಿಯಾಗಬೇಕು. ಸಮಾಜವನ್ನು ಬೆಳೆಸಬೇಕು’ ಎಂದು ಹೇಳಿದರು.</p>.<p>ರಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಡಾ.ಶರಣಬಸಪ್ಪ ಬಿ.ಕಾಮರಡ್ಡಿ ಮಾತನಾಡಿ, ‘ಮಲ್ಲಮ್ಮ ಎಲ್ಲ ಸಮಾಜಕ್ಕೂ ಮಾದರಿಯಾಗಿದ್ದಾರೆ. ಅವರನ್ನು ಒಂದು ಸಮಾಜಕ್ಕೆ ಸೀಮಿತಗೊಳಿಸಬಾರದು. ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಅಖಿಲ ಕರ್ನಾಟಕ ಹೇಮರಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆಯ ರಾಜ್ಯ ಘಟಕದ ಅಧ್ಯಕ್ಷೆ ವಿಶಾಲಾಕ್ಷಿ ಕರಡ್ಡಿ ಉಪನ್ಯಾಸ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಕರಾಟೆ ಸ್ಪರ್ಧೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಂಚಿನ ಪದಕ ಪಡೆದ ಶರಣರೆಡ್ಡಿ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ಲೋಕೋಪಯೋಗಿ ಇಲಾಖೆಯ ಎಇಇ ವಿ.ಎಸ್.ಸೂಗರೆಡ್ಡಿ ಅವರನ್ನು ಸನ್ಮಾನಿಸಲಾಯಿತು. </p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಮಾಜ ಹಿರಿಯರಾದ ಭಾಗನಗೌಡ ಸಂಕನೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸೇರಿ ಹಲವರು ಹಾಜರಿದ್ದರು.</p>.<p>ಜಿ.ಜಿ.ವಣಿಕ್ಯಾಳ ನಿರೂಪಿಸಿದರು. ಶೇಖರ್ ನಾಲವಾರ ಸ್ವಾಗತಿಸಿದರು. ಮುಖಂಡ ಮಹೇಶರೆಡ್ಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>