ಕಲಬುರಗಿ ಕೋಟೆಯಲ್ಲಿ 282 ಕುಟುಂಬಗಳು ಅಕ್ರಮವಾಗಿ ವಾಸವಾಗಿದ್ದು ಅವರನ್ನು ಅಲ್ಲಿಂದ ತೆರವುಗೊಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಆದರೆ ಅವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕಿರುವುದರಿಂದ ಇನ್ನಷ್ಟು ಕಾಲಾವಕಾಶ ನೀಡುವಂತೆ ಜಿಲ್ಲಾಡಳಿತ ಕೇಳಿಕೊಂಡಿದೆ. ಇದರಿಂದಾಗಿ ಆ ಕುಟುಂಬಗಳು ಕೋಟೆಯಲ್ಲಿಯೇ ವಾಸವಾಗಿವೆ. ಯಶವಂತ ಗುರುಕರ್ ಅವರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಈ ಕುಟುಂಬಗಳಿಗಾಗಿ ನಾಲ್ಕು ಎಕರೆ ಜಾಗದಲ್ಲಿ ಮನೆ ನಿರ್ಮಿಸಿಕೊಡಲು ಮುಂದಾಗಿದ್ದರು. ಆದರೆ ಅಲ್ಲಿಗೆ ಹೋಗಲು ಸಿದ್ಧರಿಲ್ಲ. ಹೀಗಾಗಿ ಸ್ಥಳಾಂತರ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ ಎನ್ನುತ್ತಾರೆ ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರು.