<p><strong>ಯಡ್ರಾಮಿ</strong>: ‘ಸುಖ, ಶಾಂತಿಗೆ ಧರ್ಮವೇ ಮೂಲ. ಮಾತು, ಮನ, ಕೃತಿಯಿಂದ ಒಂದಾಗಿ ಬಾಳಿದರೆ ಜೀವನದ ಉನ್ನತಿ ಸಾಧ್ಯ. ಶ್ರೇಯಸ್ಸಿಗೆ ಧರ್ಮ ಪರಿಪಾಲನೆ ಮುಖ್ಯ’ ಎಂದು ಬಾಳೆಹೊನ್ನೂರು ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಮಾಗಣಗೇರಾ ಗ್ರಾಮದಲ್ಲಿ ಶನಿವಾರ ರುದ್ರಮುನೀಶ್ವರ ಹಿರೇಮಠದ ಗುರು ಪಟ್ಟಾಧಿಕಾರ ಅಂಗವಾಗಿ ಜರುಗಿದ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಆಧುನಿಕತೆ ಮತ್ತು ವೈಚಾರಿಕತೆಯ ಹೆಸರಿನಲ್ಲಿ ಧರ್ಮ ಮತ್ತು ಸಂಸ್ಕೃತಿ ನಾಶಗೊಳ್ಳಬಾರದು. ಹೊತ್ತ ಭೂಮಿ, ಹೆತ್ತ ತಾಯಿ ಎಷ್ಟು ಮುಖ್ಯವೋ ಧರ್ಮವೂ ಅಷ್ಟೇ ಮುಖ್ಯ. ಜೀವನದ ಉಜ್ವಲ ಭವಿಷ್ಯಕ್ಕೆ ಧರ್ಮ ದಿಕ್ಸೂಚಿಯಾಗಿದೆ’ ಎಂದರು.</p>.<p>ಉಜ್ಜಯಿನಿ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ‘ಅರಿವು ಮೂಡಿಸುವ ಕೆಲಸ ಗುರುವಿನಿಂದ ಮಾತ್ರ ಸಾಧ್ಯ. ಸಕಲ ಜೀವಾತ್ಮರಿಗೆ ಒಳಿತನ್ನೇ ಬಯಸಿದ ವೀರಶೈವ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು’ ಎಂದರು.</p>.<p>ಸಿಂದಗಿ ಸಾರಂಗಮಠದ ಪ್ರಭು ಸಾರಂಗದೇವ ಶಿವಾಚಾರ್ಯ ಮಾತನಾಡಿ, ‘ಜಗದ ಕತ್ತಲೆ ಕಳೆಯಲು ಸೂರ್ಯ ಬೇಕು. ಅಜ್ಞಾನ ಕಳೆಯಲು ಗುರು ಬೇಕು. ಅರಿವು ಆದರ್ಶಗಳನ್ನು ಅರಿಯುವಾತನೆ ನಿಜವಾದ ಗುರು ಎಂದರು.</p>.<p>ಮಾಗಣಗೇರಿ ಬೃಹನ್ಮಠದ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಆಲೂರು ಹಿರೇಮಠದ ಕೆಂಚವೃಷಭೇಂದ್ರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ 15ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಂಡಿದ್ದರು.</p>.<p>ಸಮಾರಂಭಕ್ಕೂ ಮುನ್ನ ಮಾಗಣಗೇರಾ ಗ್ರಾಮದಲ್ಲಿ ಉಭಯ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಸಂಭ್ರಮದಿಂದ ಜರುಗಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಆಶೀರ್ವಾದ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಡ್ರಾಮಿ</strong>: ‘ಸುಖ, ಶಾಂತಿಗೆ ಧರ್ಮವೇ ಮೂಲ. ಮಾತು, ಮನ, ಕೃತಿಯಿಂದ ಒಂದಾಗಿ ಬಾಳಿದರೆ ಜೀವನದ ಉನ್ನತಿ ಸಾಧ್ಯ. ಶ್ರೇಯಸ್ಸಿಗೆ ಧರ್ಮ ಪರಿಪಾಲನೆ ಮುಖ್ಯ’ ಎಂದು ಬಾಳೆಹೊನ್ನೂರು ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಮಾಗಣಗೇರಾ ಗ್ರಾಮದಲ್ಲಿ ಶನಿವಾರ ರುದ್ರಮುನೀಶ್ವರ ಹಿರೇಮಠದ ಗುರು ಪಟ್ಟಾಧಿಕಾರ ಅಂಗವಾಗಿ ಜರುಗಿದ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಆಧುನಿಕತೆ ಮತ್ತು ವೈಚಾರಿಕತೆಯ ಹೆಸರಿನಲ್ಲಿ ಧರ್ಮ ಮತ್ತು ಸಂಸ್ಕೃತಿ ನಾಶಗೊಳ್ಳಬಾರದು. ಹೊತ್ತ ಭೂಮಿ, ಹೆತ್ತ ತಾಯಿ ಎಷ್ಟು ಮುಖ್ಯವೋ ಧರ್ಮವೂ ಅಷ್ಟೇ ಮುಖ್ಯ. ಜೀವನದ ಉಜ್ವಲ ಭವಿಷ್ಯಕ್ಕೆ ಧರ್ಮ ದಿಕ್ಸೂಚಿಯಾಗಿದೆ’ ಎಂದರು.</p>.<p>ಉಜ್ಜಯಿನಿ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ‘ಅರಿವು ಮೂಡಿಸುವ ಕೆಲಸ ಗುರುವಿನಿಂದ ಮಾತ್ರ ಸಾಧ್ಯ. ಸಕಲ ಜೀವಾತ್ಮರಿಗೆ ಒಳಿತನ್ನೇ ಬಯಸಿದ ವೀರಶೈವ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು’ ಎಂದರು.</p>.<p>ಸಿಂದಗಿ ಸಾರಂಗಮಠದ ಪ್ರಭು ಸಾರಂಗದೇವ ಶಿವಾಚಾರ್ಯ ಮಾತನಾಡಿ, ‘ಜಗದ ಕತ್ತಲೆ ಕಳೆಯಲು ಸೂರ್ಯ ಬೇಕು. ಅಜ್ಞಾನ ಕಳೆಯಲು ಗುರು ಬೇಕು. ಅರಿವು ಆದರ್ಶಗಳನ್ನು ಅರಿಯುವಾತನೆ ನಿಜವಾದ ಗುರು ಎಂದರು.</p>.<p>ಮಾಗಣಗೇರಿ ಬೃಹನ್ಮಠದ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಆಲೂರು ಹಿರೇಮಠದ ಕೆಂಚವೃಷಭೇಂದ್ರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ 15ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಂಡಿದ್ದರು.</p>.<p>ಸಮಾರಂಭಕ್ಕೂ ಮುನ್ನ ಮಾಗಣಗೇರಾ ಗ್ರಾಮದಲ್ಲಿ ಉಭಯ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಸಂಭ್ರಮದಿಂದ ಜರುಗಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಆಶೀರ್ವಾದ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>