ಕೊರೊನಾ ನೆಪ ಹೇಳಿಕೊಂಡು ಸರ್ಕಾರ ಮುಸ್ಲಿಂ ಸಮುದಾಯದ ಹಬ್ಬಗಳ ಮೇಲೆ ನಿಯಂತ್ರಣ ಹೇರುತ್ತಿದೆ. ಇದು ಸಾಂವಿಧಾನಿಕ ಕ್ರಮವಲ್ಲ. ಈ ಹಿಂದೆ ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿಯೇ ವಿಧಾನಸಭೆ ಉಪಚುನಾವಣೆಗಳನ್ನು ಮಾಡಲಾಗಿದೆ. ಪಕ್ಷದ ಪ್ರಚಾರ, ಮೆರವಣಿಗೆ, ವೇದಿಕೆ ಕಾರ್ಯಕ್ರಮಗಳಲ್ಲೂ ಸಾವಿರಾರು ಮಂದಿಯನ್ನು ಸೇರಿಸಿದ್ದಾರೆ. ಅಲ್ಲದೇ, ಕೇಂದ್ರ ಮಂತ್ರಿ ಮಂಡಳದಲ್ಲಿ ಸ್ಥಾನ ಪಡೆದವರು ಜನಾಶೀರ್ವಾದ ಯಾತ್ರೆ ಮಾಡಿ, ಮೆರವಣಿಗೆ ನಡೆಸಿದ್ದಾರೆ. ಕಾರ್ಯಕರ್ತರ ದೊಡ್ಡ ಗುಂಪು ಸೇರಿಸಿ ಸಭೆ– ಸಮಾರಂಭ ಮಾಡಿದ್ದಾರೆ. ಇದಾವುದಕ್ಕೂ ಕೋವಿಡ್ ಅಡ್ಡಿ ಬರಲಿಲ್ಲವೇ? ಎಂದು ಪ್ರತಿಭಟನಾಕಾರರು ಮನವಿಯಲ್ಲಿ ಪ್ರಶ್ನಿಸಿದ್ದಾರೆ.