<p><strong>ಆಳಂದ: </strong>ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಪಂಚಮಸಾಲಿ ಸಮಾಜದ ಸಮಗ್ರ ಅಭಿವೃದ್ಧಿಗಾಗಿ 2ಎ ಮೀಸಲಾತಿ ಅಗತ್ಯವಾಗಿದೆ. ನಮ್ಮ ಬೇಡಿಕೆಯು ನ್ಯಾಯಸಮ್ಮತವಾಗಿರುವದರಿಂದ ಮೀಸಲಾತಿ ಪಡೆಯುವರಿಗೂ ಹೋರಾಟ ನಡೆಯಲಿದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.</p>.<p>ಪಟ್ಟಣದ ಏಕಾಂತರಾಮಯ್ಯ ಅನುಭವ ಮಂಟಪದಲ್ಲಿ ಸೋಮವಾರ ಲಿಂಗಾಯತ ಪಂಚಮಸಾಲಿ ಸಮಾಜದ ‘ಶರಣು ಶರಣಾರ್ಥಿ’ ಜಾಥಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು 6 ತಿಂಗಳಲ್ಲಿ ನಮ್ಮ ಹೋರಾಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮುಷ್ಕರ ಸ್ಥಗಿತಗೊಳಿಸಲಾಗಿದೆ. ಈ ರೀತಿ ಜನಜಾಗೃತಿ ಜಾಥಾ ಮೂಲಕ 2ಎ ಮೀಸಲಾಯತಿ ಪಡೆಯುವರೆಗೂ ಹೋರಾಟ ಸ್ಥಗಿತಗೊಳ್ಳುವದಿಲ್ಲ ಎಂದರು.</p>.<p>ಧುತ್ತರಗಾಂವನ ವಿಶ್ವನಾಥ ಕೋರಣೇಶ್ವರ ಸ್ವಾಮೀಜಿ, ಅಖಿಲ ಭಾರತ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಜಿಪಂ ಸದಸ್ಯ ಮಲ್ಲಿನಾಥ ಪಾಟೀಲ ಮದಗುಣಕಿ, ಬಿ.ಎಸ್.ಪಾಟೀಲ ನಾಗರಾಳ, ಮಲ್ಲಿನಾಥ ಯಲಶೆಟ್ಟಿ , ಸಿದ್ದರಾಮ ಅರಳಿಮರ , ಮಡಿವಾಳಪ್ಪ ದೇಸೆಟ್ಟಿ ಮಾತನಾಡಿದರು.</p>.<p>ಮುಖಂಡ ಶಂಕರರಾವ ದೇಶಮುಖ ಅಧ್ಯಕ್ಷತೆ ವಹಿಸಿದರು. ಆನಂದರಾವ ದೇಶಮುಖ, , ಶರಣಪ್ಪ ಹತ್ತರಕಿ, ಶ್ರೀಮಂತರಾವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ: </strong>ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಪಂಚಮಸಾಲಿ ಸಮಾಜದ ಸಮಗ್ರ ಅಭಿವೃದ್ಧಿಗಾಗಿ 2ಎ ಮೀಸಲಾತಿ ಅಗತ್ಯವಾಗಿದೆ. ನಮ್ಮ ಬೇಡಿಕೆಯು ನ್ಯಾಯಸಮ್ಮತವಾಗಿರುವದರಿಂದ ಮೀಸಲಾತಿ ಪಡೆಯುವರಿಗೂ ಹೋರಾಟ ನಡೆಯಲಿದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.</p>.<p>ಪಟ್ಟಣದ ಏಕಾಂತರಾಮಯ್ಯ ಅನುಭವ ಮಂಟಪದಲ್ಲಿ ಸೋಮವಾರ ಲಿಂಗಾಯತ ಪಂಚಮಸಾಲಿ ಸಮಾಜದ ‘ಶರಣು ಶರಣಾರ್ಥಿ’ ಜಾಥಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು 6 ತಿಂಗಳಲ್ಲಿ ನಮ್ಮ ಹೋರಾಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮುಷ್ಕರ ಸ್ಥಗಿತಗೊಳಿಸಲಾಗಿದೆ. ಈ ರೀತಿ ಜನಜಾಗೃತಿ ಜಾಥಾ ಮೂಲಕ 2ಎ ಮೀಸಲಾಯತಿ ಪಡೆಯುವರೆಗೂ ಹೋರಾಟ ಸ್ಥಗಿತಗೊಳ್ಳುವದಿಲ್ಲ ಎಂದರು.</p>.<p>ಧುತ್ತರಗಾಂವನ ವಿಶ್ವನಾಥ ಕೋರಣೇಶ್ವರ ಸ್ವಾಮೀಜಿ, ಅಖಿಲ ಭಾರತ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಜಿಪಂ ಸದಸ್ಯ ಮಲ್ಲಿನಾಥ ಪಾಟೀಲ ಮದಗುಣಕಿ, ಬಿ.ಎಸ್.ಪಾಟೀಲ ನಾಗರಾಳ, ಮಲ್ಲಿನಾಥ ಯಲಶೆಟ್ಟಿ , ಸಿದ್ದರಾಮ ಅರಳಿಮರ , ಮಡಿವಾಳಪ್ಪ ದೇಸೆಟ್ಟಿ ಮಾತನಾಡಿದರು.</p>.<p>ಮುಖಂಡ ಶಂಕರರಾವ ದೇಶಮುಖ ಅಧ್ಯಕ್ಷತೆ ವಹಿಸಿದರು. ಆನಂದರಾವ ದೇಶಮುಖ, , ಶರಣಪ್ಪ ಹತ್ತರಕಿ, ಶ್ರೀಮಂತರಾವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>