<p><strong>ಕಲಬುರಗಿ:</strong> ಅಖಿಲ ಭಾರತೀಯ ಕೋಲಿ ಸಮಾಜ (ಪರ್ಯಾಯ ಪದಗಳ) ರಾಜ್ಯ ಸಮಿತಿ ಪದಾಧಿಕಾರಿಗಳ ಕಾರ್ಯಕಾರಿಣಿ ಸದಸ್ಯರ ಸಭೆ ನಗರದ ಐವಾನ್–ಇ– ಶಾಹಿ ಅತಿಥಿಗೃಹದಲ್ಲಿ ಶುಕ್ರವಾರ ನಡೆಯಿತು.</p>.<p>ಸಮಾಜದ ರಾಜ್ಯಾಧ್ಯಕ್ಷ ದತ್ತಾತ್ರೇಯ ರೆಡ್ಡಿ ಮುದಿರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯಿತು.</p>.<p>ಕೋಲಿ, ಕಬ್ಬಿಲಿಗ, ಅಂಬಿಗ, ಸುಣಗಾರ, ಬೆಸ್ತ, ಬಾರಕೇರ ಸೇರಿದಂತೆ ಸಮಾಜದ ಇತರ ಪರ್ಯಾಯ ಪದಗಳನ್ನು ಎಸ್ಟಿ ಪಟ್ಟಿಗೆ ಸೇರಿಸುವ ಕಡತ ಕುರಿತು ರಾಜ್ಯ ಸರ್ಕಾರ ನ್ಯೂನತೆ ಸರಿಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಮುಖ್ಯಮಂತ್ರಿ, ಮಂತ್ರಿಗಳಿಗೆ ಮೇಲೆ ಒತ್ತಡ ಹೇರಬೇಕು. ಹಿಂದುಳಿದ ಆಯೋಗದ ವತಿಯಿಂದ ನಡೆದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಜಾತಿ ಜನಗಣತಿಯಿಂದ ಕೋಲಿ ಸಮಾಜದ ಪರ್ಯಾಯ ಪದಗಳಿಗೆ ಅನ್ಯಾಯವಾಗಿದೆ. ಈ ಸಮಾಜದ ಜನಸಂಖ್ಯೆಯನ್ನು ಅತ್ಯಂತ ಕಡಿಮೆ ನಮೂದಿಸಲಾಗಿದೆ. ಈ ಜಾತಿಗಳ ಒಟ್ಟು ಜನಸಂಖ್ಯೆ 32 ಲಕ್ಷ ದಾಟುತ್ತದೆ. ಆದರೆ, ರಾಜ್ಯದಲ್ಲಿ ಈ ಸಮುದಾಯದ ಜನಸಂಖ್ಯೆ 14.5 ಲಕ್ಷ ಮಾತ್ರ ಎಂದು ನಮೂದಾಗಿದೆ. ಇದನ್ನು ಸರಿಪಡಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಕುರಿತು ನಿರ್ಣಯ ಕೈಗೊಳ್ಳಲಾಯಿತು.</p>.<p>ಟಿ.ಡಿ.ರಾಜ್ ಕಾರ್ಯಕ್ರಮ ನಿರೂಪಿಸಿದರು. ಶಂಕರ ಕಟ್ಟಿ ಸಂಗಾವಿ ವಂದಿಸಿದರು. ಸಭೆಯಲ್ಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಾಗುಬಾಯಿ ಬುಳ್ಳಾ, ರಾಷ್ಟ್ರೀಯ ಪರಿಷತ್ ಸದಸ್ಯ ಶಿವಲಿಂಗಪ್ಪ ಕಿನ್ನೂರ, ಜಿಲ್ಲಾ ಅಧ್ಯಕ್ಷ ದತ್ತಾತ್ರೇಯ ದೇವರನಾವದಗಿ, ಉಪಾಧ್ಯಕ್ಷ ಮಲ್ಲಪ್ಪ ಬಾಗಲಕೋಟ್, ಖಜಾಂಚಿ ಮಡಿವಾಳಪ್ಪ ನರಿಬೋಳ, ಸಂಘಟನಾ ಕಾರ್ಯದರ್ಶಿ ಉಮೇಶ ಮುದ್ನಾಳ, ಯುವ ಮುಖಂಡರಾದ ದೇವಿಂದ್ರ ಚಿಗರಳ್ಳಿ, ಅನಿತಾ ಕೊರಬಾ, ಲಕ್ಷ್ಮಣರೆಡ್ಡಿ ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪ್ರಮುಖರು ಭಾಗವಹಿಸಿದ್ದರು.</p>.<p>ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಆವುಂಟಿ ಸ್ವಾಗತಿಸಿದರು.</p>.<p class="Subhead">ಪೆಹಲ್ಗಾಮ್ನಲ್ಲಿ ಮೃತರಿಗೆ ಶ್ರದ್ಧಾಂಜಲಿ: ಕಾಶ್ಮೀರದ ಪೆಹಲ್ಗಾಮ್ನಲ್ಲಿ ಉಗ್ರಗಾಮಿಗಳಿಂದ ಹತರಾದ 26 ಜನರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಕೇಂದ್ರ ಸರ್ಕಾರ ನಡೆಸಿರುವ ‘ಆಪರೇಷನ್ ಸಿಂಧೂರ’ಕ್ಕೆ ಬೆಂಬಲ ವ್ಯಕ್ತಪಡಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಅಖಿಲ ಭಾರತೀಯ ಕೋಲಿ ಸಮಾಜ (ಪರ್ಯಾಯ ಪದಗಳ) ರಾಜ್ಯ ಸಮಿತಿ ಪದಾಧಿಕಾರಿಗಳ ಕಾರ್ಯಕಾರಿಣಿ ಸದಸ್ಯರ ಸಭೆ ನಗರದ ಐವಾನ್–ಇ– ಶಾಹಿ ಅತಿಥಿಗೃಹದಲ್ಲಿ ಶುಕ್ರವಾರ ನಡೆಯಿತು.</p>.<p>ಸಮಾಜದ ರಾಜ್ಯಾಧ್ಯಕ್ಷ ದತ್ತಾತ್ರೇಯ ರೆಡ್ಡಿ ಮುದಿರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯಿತು.</p>.<p>ಕೋಲಿ, ಕಬ್ಬಿಲಿಗ, ಅಂಬಿಗ, ಸುಣಗಾರ, ಬೆಸ್ತ, ಬಾರಕೇರ ಸೇರಿದಂತೆ ಸಮಾಜದ ಇತರ ಪರ್ಯಾಯ ಪದಗಳನ್ನು ಎಸ್ಟಿ ಪಟ್ಟಿಗೆ ಸೇರಿಸುವ ಕಡತ ಕುರಿತು ರಾಜ್ಯ ಸರ್ಕಾರ ನ್ಯೂನತೆ ಸರಿಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಮುಖ್ಯಮಂತ್ರಿ, ಮಂತ್ರಿಗಳಿಗೆ ಮೇಲೆ ಒತ್ತಡ ಹೇರಬೇಕು. ಹಿಂದುಳಿದ ಆಯೋಗದ ವತಿಯಿಂದ ನಡೆದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಜಾತಿ ಜನಗಣತಿಯಿಂದ ಕೋಲಿ ಸಮಾಜದ ಪರ್ಯಾಯ ಪದಗಳಿಗೆ ಅನ್ಯಾಯವಾಗಿದೆ. ಈ ಸಮಾಜದ ಜನಸಂಖ್ಯೆಯನ್ನು ಅತ್ಯಂತ ಕಡಿಮೆ ನಮೂದಿಸಲಾಗಿದೆ. ಈ ಜಾತಿಗಳ ಒಟ್ಟು ಜನಸಂಖ್ಯೆ 32 ಲಕ್ಷ ದಾಟುತ್ತದೆ. ಆದರೆ, ರಾಜ್ಯದಲ್ಲಿ ಈ ಸಮುದಾಯದ ಜನಸಂಖ್ಯೆ 14.5 ಲಕ್ಷ ಮಾತ್ರ ಎಂದು ನಮೂದಾಗಿದೆ. ಇದನ್ನು ಸರಿಪಡಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಕುರಿತು ನಿರ್ಣಯ ಕೈಗೊಳ್ಳಲಾಯಿತು.</p>.<p>ಟಿ.ಡಿ.ರಾಜ್ ಕಾರ್ಯಕ್ರಮ ನಿರೂಪಿಸಿದರು. ಶಂಕರ ಕಟ್ಟಿ ಸಂಗಾವಿ ವಂದಿಸಿದರು. ಸಭೆಯಲ್ಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಾಗುಬಾಯಿ ಬುಳ್ಳಾ, ರಾಷ್ಟ್ರೀಯ ಪರಿಷತ್ ಸದಸ್ಯ ಶಿವಲಿಂಗಪ್ಪ ಕಿನ್ನೂರ, ಜಿಲ್ಲಾ ಅಧ್ಯಕ್ಷ ದತ್ತಾತ್ರೇಯ ದೇವರನಾವದಗಿ, ಉಪಾಧ್ಯಕ್ಷ ಮಲ್ಲಪ್ಪ ಬಾಗಲಕೋಟ್, ಖಜಾಂಚಿ ಮಡಿವಾಳಪ್ಪ ನರಿಬೋಳ, ಸಂಘಟನಾ ಕಾರ್ಯದರ್ಶಿ ಉಮೇಶ ಮುದ್ನಾಳ, ಯುವ ಮುಖಂಡರಾದ ದೇವಿಂದ್ರ ಚಿಗರಳ್ಳಿ, ಅನಿತಾ ಕೊರಬಾ, ಲಕ್ಷ್ಮಣರೆಡ್ಡಿ ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪ್ರಮುಖರು ಭಾಗವಹಿಸಿದ್ದರು.</p>.<p>ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಆವುಂಟಿ ಸ್ವಾಗತಿಸಿದರು.</p>.<p class="Subhead">ಪೆಹಲ್ಗಾಮ್ನಲ್ಲಿ ಮೃತರಿಗೆ ಶ್ರದ್ಧಾಂಜಲಿ: ಕಾಶ್ಮೀರದ ಪೆಹಲ್ಗಾಮ್ನಲ್ಲಿ ಉಗ್ರಗಾಮಿಗಳಿಂದ ಹತರಾದ 26 ಜನರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಕೇಂದ್ರ ಸರ್ಕಾರ ನಡೆಸಿರುವ ‘ಆಪರೇಷನ್ ಸಿಂಧೂರ’ಕ್ಕೆ ಬೆಂಬಲ ವ್ಯಕ್ತಪಡಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>