<p><strong>ಕಲಬುರಗಿ:</strong> ‘ನಾಲ್ಕು ದಶಕಗಳಿಂದ ಕನ್ನಡದ ತೇರು ಎಳೆದಿದ್ದಕ್ಕಾಗಿ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನ ಲಭಿಸಿದೆ. ನಿಮ್ಮೆಲ್ಲರ ಪ್ರೀತಿಯ ಕಾರಣದಿಂದಾಗಿ ಈ ಅವಕಾಶ ಒಪ್ಪಿಕೊಂಡಿರುವೆ’ ಎಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಗೊ.ರು.ಚನ್ನಬಸಪ್ಪ ತಿಳಿಸಿದರು.</p>.<p>ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ನನಗೆ ಬೇಡ ಅಂತ ಹೇಳಿದ್ದೆ. ಎಲ್ಲರ ತೀರ್ಮಾನವನ್ನು ನನ್ನಿಂದ ನಿರಾಕರಿಸಲು ಸಾಧ್ಯವಾಗಲಿಲ್ಲ’ ಎಂದರು.</p>.<p>‘ಡಿಸೆಂಬರ್ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳ ವಿಷಯ ಪ್ರಸ್ತಾಪಿಸಿ ಎಂದು ಹಲವರು ಸಲಹೆ ನೀಡಿದ್ದಾರೆ. ಅವರೆಲ್ಲರ ವಿಷಯಗಳ ಜೊತೆ ಜೊತೆಗೆ ರಾಜ್ಯದ ಎಲ್ಲಾ ವಿಷಯಗಳ ಕುರಿತು ಪ್ರಸ್ತಾಪ ಮಾಡಲಾಗುವುದು’ ಎಂದು ಹೇಳಿದರು.</p>.<p>ಗುಲಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ವೀರಣ್ಣ ದಂಡೆ ಮಾತನಾಡಿ, ‘ಗೊ.ರು.ಚನ್ನಬಸಪ್ಪ ಅವರು ನಾಡು ನುಡಿಗಳ ಬಗ್ಗೆ ಚಿಂತನೆ ಮಾಡಿ ಅನೇಕ ಕಥೆಗಳನ್ನು ಬರೆದರು. ಅವರಲ್ಲಿರುವ ಗುಣಗಳಲ್ಲಿ ಉತ್ತಮವಾದ ಗುಣ ಭ್ರಷ್ಟಾಚಾರಿ ಆಗದೇ ಇರುವುದು’ ಎಂದು ಬಣ್ಣಿಸಿದರು.</p>.<p>ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸ್ವಾಗತಿಸಿದರು. ಪತ್ರಕರ್ತ ಶಿವರಂಜನ್ ಸತ್ಯಂಪೇಟೆ ನಿರೂಪಿಸಿದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಧರ್ಮಣ್ಣಾ ಧನ್ನಿ, ಶಾಂತಾ ಬಿ.ಅಷ್ಟಿಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ನಾಲ್ಕು ದಶಕಗಳಿಂದ ಕನ್ನಡದ ತೇರು ಎಳೆದಿದ್ದಕ್ಕಾಗಿ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನ ಲಭಿಸಿದೆ. ನಿಮ್ಮೆಲ್ಲರ ಪ್ರೀತಿಯ ಕಾರಣದಿಂದಾಗಿ ಈ ಅವಕಾಶ ಒಪ್ಪಿಕೊಂಡಿರುವೆ’ ಎಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಗೊ.ರು.ಚನ್ನಬಸಪ್ಪ ತಿಳಿಸಿದರು.</p>.<p>ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ನನಗೆ ಬೇಡ ಅಂತ ಹೇಳಿದ್ದೆ. ಎಲ್ಲರ ತೀರ್ಮಾನವನ್ನು ನನ್ನಿಂದ ನಿರಾಕರಿಸಲು ಸಾಧ್ಯವಾಗಲಿಲ್ಲ’ ಎಂದರು.</p>.<p>‘ಡಿಸೆಂಬರ್ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳ ವಿಷಯ ಪ್ರಸ್ತಾಪಿಸಿ ಎಂದು ಹಲವರು ಸಲಹೆ ನೀಡಿದ್ದಾರೆ. ಅವರೆಲ್ಲರ ವಿಷಯಗಳ ಜೊತೆ ಜೊತೆಗೆ ರಾಜ್ಯದ ಎಲ್ಲಾ ವಿಷಯಗಳ ಕುರಿತು ಪ್ರಸ್ತಾಪ ಮಾಡಲಾಗುವುದು’ ಎಂದು ಹೇಳಿದರು.</p>.<p>ಗುಲಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ವೀರಣ್ಣ ದಂಡೆ ಮಾತನಾಡಿ, ‘ಗೊ.ರು.ಚನ್ನಬಸಪ್ಪ ಅವರು ನಾಡು ನುಡಿಗಳ ಬಗ್ಗೆ ಚಿಂತನೆ ಮಾಡಿ ಅನೇಕ ಕಥೆಗಳನ್ನು ಬರೆದರು. ಅವರಲ್ಲಿರುವ ಗುಣಗಳಲ್ಲಿ ಉತ್ತಮವಾದ ಗುಣ ಭ್ರಷ್ಟಾಚಾರಿ ಆಗದೇ ಇರುವುದು’ ಎಂದು ಬಣ್ಣಿಸಿದರು.</p>.<p>ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸ್ವಾಗತಿಸಿದರು. ಪತ್ರಕರ್ತ ಶಿವರಂಜನ್ ಸತ್ಯಂಪೇಟೆ ನಿರೂಪಿಸಿದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಧರ್ಮಣ್ಣಾ ಧನ್ನಿ, ಶಾಂತಾ ಬಿ.ಅಷ್ಟಿಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>