<p><strong>ಕಲಬುರಗಿ:</strong> ತಾಲ್ಲೂಕಿನ ಹತಗುಂದಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹುದ್ದೆಯಿಂದ ನಿವೃತ್ತರಾದ ರಾಜಶೇಖರ ಅಪ್ಪಾರಾಯ ಗುಂಡದ ಅವರು ಶಾಲೆಗೆ ₹ 50 ಸಾವಿರ ದೇಣಿಗೆ ನೀಡಿದ್ದಾರೆ.</p>.<p>ನಿವೃತ್ತಿ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಶಾಲೆಯ ಅಭಿವೃದ್ಧಿಗಾಗಿ ದೇಣಿಗೆ ನೀಡುವ ವಿಚಾರವನ್ನು ತಿಳಿಸಿದರು. </p>.<p>ಗ್ರಾಮಸ್ಥರು ರಾಜಶೇಖರ ಅವರಿಗೆ ಚಿನ್ನದ ಕಾಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಟ್ಟರು. ಸಾನ್ನಿಧ್ಯ ವಹಿಸಿದ್ದ ಹಿರೇಸಾವಳಗಿಯ ಗುರುನಾಥ ಸ್ವಾಮೀಜಿ ಮಾತನಾಡಿ, ‘ಉತ್ತಮ ಸಮಾಜ ಕಟ್ಟಲು ಶಿಕ್ಷಕರ ಪಾತ್ರ ಬಾಳ ಅವಶ್ಯಕತೆ ಇದೆ. ರಾಜಶೇಖರ ಅವರು ಸಾವಿರಾರು ವಿದ್ಯಾರ್ಥಿಗಳ ಬಾಳು ಬೆಳಗಿಸಿದ್ದಾರೆ’ ಎಂದರು.</p>.<p>ಹಣಮಂತರಾಯ ಜಿ. ಗಡ್ಡ, ರವಿಚಂದ್ರ ಆರ್. ಪಟ್ಟ, ಶಾಂತಾಬಾಯಿ ಎಸ್. ಪೊಲೀಸ್ ಪಾಟೀಲ, ಲೋಹಿತ್ ಪಾಟೀಲ, ಕಾಶಿಬಾಯಿ ಪಾಟೀಲ, ರಾಜಶೇಖರ್ ಆ ಗುಡ್ಡ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ತಾಲ್ಲೂಕಿನ ಹತಗುಂದಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹುದ್ದೆಯಿಂದ ನಿವೃತ್ತರಾದ ರಾಜಶೇಖರ ಅಪ್ಪಾರಾಯ ಗುಂಡದ ಅವರು ಶಾಲೆಗೆ ₹ 50 ಸಾವಿರ ದೇಣಿಗೆ ನೀಡಿದ್ದಾರೆ.</p>.<p>ನಿವೃತ್ತಿ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಶಾಲೆಯ ಅಭಿವೃದ್ಧಿಗಾಗಿ ದೇಣಿಗೆ ನೀಡುವ ವಿಚಾರವನ್ನು ತಿಳಿಸಿದರು. </p>.<p>ಗ್ರಾಮಸ್ಥರು ರಾಜಶೇಖರ ಅವರಿಗೆ ಚಿನ್ನದ ಕಾಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಟ್ಟರು. ಸಾನ್ನಿಧ್ಯ ವಹಿಸಿದ್ದ ಹಿರೇಸಾವಳಗಿಯ ಗುರುನಾಥ ಸ್ವಾಮೀಜಿ ಮಾತನಾಡಿ, ‘ಉತ್ತಮ ಸಮಾಜ ಕಟ್ಟಲು ಶಿಕ್ಷಕರ ಪಾತ್ರ ಬಾಳ ಅವಶ್ಯಕತೆ ಇದೆ. ರಾಜಶೇಖರ ಅವರು ಸಾವಿರಾರು ವಿದ್ಯಾರ್ಥಿಗಳ ಬಾಳು ಬೆಳಗಿಸಿದ್ದಾರೆ’ ಎಂದರು.</p>.<p>ಹಣಮಂತರಾಯ ಜಿ. ಗಡ್ಡ, ರವಿಚಂದ್ರ ಆರ್. ಪಟ್ಟ, ಶಾಂತಾಬಾಯಿ ಎಸ್. ಪೊಲೀಸ್ ಪಾಟೀಲ, ಲೋಹಿತ್ ಪಾಟೀಲ, ಕಾಶಿಬಾಯಿ ಪಾಟೀಲ, ರಾಜಶೇಖರ್ ಆ ಗುಡ್ಡ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>