‘ಬಸವಣ್ಣನವರ ಕಲ್ಲಿನ ಮೂರ್ತಿಯನ್ನು ಉದ್ದೇಶಪೂರ್ವಕವಾಗಿ ಭಗ್ನಗೊಳಿಸಲಾಗಿದೆ. ಸತ್ಯಾಸತ್ಯತೆ ಬಯಲಿಗೆಳೆಯದೆ ಬಸವಾನುಯಾಯಿಗಳ ಕಣ್ಣಿಗೆ ಮಣ್ಣೆರೆಚುವ ಕಾರ್ಯ ನಡೆದಿದೆ. ಆದರೆ, ಪೊಲೀಸರು ಕಾಟಾಚಾರದ ತನಿಖೆ ನಡೆಸಿದ್ದು, ಇದು ಆಕಸ್ಮಿಕ ಘಟನೆ ಎನ್ನುವಂತೆ ಬಿಂಬಿಸುತ್ತಿದ್ದಾರೆ. ಇದು ಶುದ್ಧ ಸುಳ್ಳು ತನಿಖೆ. ಕೂಡಲೇ ಉನ್ನತ ಮಟ್ಟದ ತನಿಖೆ ಮಾಡಿ, ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.