<p><strong>ಕಲಬುರಗಿ</strong>: ನಗರದ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ವಿಜ್ಞಾನ ವಿಷಯಗಳ ಅಭ್ಯಾಸ ಪುಸ್ತಕ ಬಿಡುಗಡೆ ಸಮಾರಂಭ ನೆರವೇರಿತು.</p>.<p>ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪುಸ್ತಕಗಳನ್ನು ಮುಖ್ಯ ಅತಿಥಿಗಳಾಗಿದ್ದ ಕೆ.ಬಿ.ಎನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಿಶಾಲದತ್ತ ಕೊಹಿರ್, ಆರ್.ಜೆ. ಕಾಲೇಜಿನ ಪ್ರಾಚಾರ್ಯ ಭುರ್ಲಿ ಪ್ರಹ್ಲಾದ, ಜ್ಯೋತಿ ಪಿ. ಭುರ್ಲಿ, ವೀರೇಶ ಕುಲಕರ್ಣಿ, ಶರಣಪ್ಪ ಬಬಲೇಶ್ವರ ಬಿಡುಗಡೆ ಮಾಡಿದರು.</p>.<p>ವಿಶಾಲದತ್ತ ಕೊಹಿರ್ ಮಾತನಾಡಿ, ‘ಈ ಅಭ್ಯಾಸ ಪುಸ್ತಕಗಳು ಭುರ್ಲಿ ಅವರ ಮೂವತ್ತು ವರ್ಷಗಳ ತಪಸ್ಸಿನ ಫಲವಾಗಿದೆ. ಪುಸ್ತಕಗಳು ರಚನಾತ್ಮಕವಾಗಿ ಮೂಡಿ ಬಂದಿವೆ. ಅವು ವಿದ್ಯಾರ್ಥಿಗಳ ಭವಿಷ್ಯದ ದಡವನ್ನು ಸೇರಲು ಸಹಾಯವಾಗುತ್ತವೆ‘ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಭುರ್ಲಿ ಪ್ರಹ್ಲಾದ ಮಾತನಾಡಿ, ‘ಕಲ್ಯಾಣ ಕರ್ನಾಟಕದ ಅವಶ್ಯಕತೆಗೆ ಅನುಗುಣವಾಗಿ ಪುಸ್ತಕಳನ್ನು ವಿನ್ಯಾಸಗೊಳಿಸಿರುವುದರಿಂದ ವಿದ್ಯಾರ್ಥಿಗಳು ಪುಸ್ತಕಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಇದು ವಿದ್ಯಾರ್ಥಿಗಳಿಗೆ ಒತ್ತಡವಿಲ್ಲದೇ ವಿಷಯವನ್ನು ಓದಲು ಸಹಾಯ ಮಾಡುತ್ತದೆ’ ಎಂದು ಹೇಳಿದರು.</p>.<p>ವಿಷಯ ಉಪನ್ಯಾಸಕರುಗಳಾದ ಕೇದಾರ ದೀಕ್ಷಿತ್, ಪ್ರಕಾಶ ಕಾಂತೀಕರ, ವೈಶಾಲಿ ದೇಶಪಾಂಡೆ, ಡಿ ಕೊಂಡಲರಾವ್ ಪುಸ್ತಕ ಕುರಿತು ಅನಿಸಿಕೆಗಳನ್ನು ಹೇಳಿದರು.</p>.<p>ವಿದ್ಯಾರ್ಥಿನಿಯರಾದ ತ್ರಿವೇಣಿ, ವರ್ಷಾ, ವಾಣಿಶ್ರೀ ಮತ್ತು ಅಂಬಿಕಾ ಪ್ರಾರ್ಥನೆ ಗೀತೆ ಹಾಡಿದರು.</p>.<p>ನಿರೂಪಣೆಯನ್ನು ಮಳೇಂದ್ರ ಹಿರೇಮಠ ನಡೆಸಿಕೊಟ್ಟರು. ಚಂದ್ರಭಾನು ವಂದನಾರ್ಪಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಗರದ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ವಿಜ್ಞಾನ ವಿಷಯಗಳ ಅಭ್ಯಾಸ ಪುಸ್ತಕ ಬಿಡುಗಡೆ ಸಮಾರಂಭ ನೆರವೇರಿತು.</p>.<p>ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪುಸ್ತಕಗಳನ್ನು ಮುಖ್ಯ ಅತಿಥಿಗಳಾಗಿದ್ದ ಕೆ.ಬಿ.ಎನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಿಶಾಲದತ್ತ ಕೊಹಿರ್, ಆರ್.ಜೆ. ಕಾಲೇಜಿನ ಪ್ರಾಚಾರ್ಯ ಭುರ್ಲಿ ಪ್ರಹ್ಲಾದ, ಜ್ಯೋತಿ ಪಿ. ಭುರ್ಲಿ, ವೀರೇಶ ಕುಲಕರ್ಣಿ, ಶರಣಪ್ಪ ಬಬಲೇಶ್ವರ ಬಿಡುಗಡೆ ಮಾಡಿದರು.</p>.<p>ವಿಶಾಲದತ್ತ ಕೊಹಿರ್ ಮಾತನಾಡಿ, ‘ಈ ಅಭ್ಯಾಸ ಪುಸ್ತಕಗಳು ಭುರ್ಲಿ ಅವರ ಮೂವತ್ತು ವರ್ಷಗಳ ತಪಸ್ಸಿನ ಫಲವಾಗಿದೆ. ಪುಸ್ತಕಗಳು ರಚನಾತ್ಮಕವಾಗಿ ಮೂಡಿ ಬಂದಿವೆ. ಅವು ವಿದ್ಯಾರ್ಥಿಗಳ ಭವಿಷ್ಯದ ದಡವನ್ನು ಸೇರಲು ಸಹಾಯವಾಗುತ್ತವೆ‘ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಭುರ್ಲಿ ಪ್ರಹ್ಲಾದ ಮಾತನಾಡಿ, ‘ಕಲ್ಯಾಣ ಕರ್ನಾಟಕದ ಅವಶ್ಯಕತೆಗೆ ಅನುಗುಣವಾಗಿ ಪುಸ್ತಕಳನ್ನು ವಿನ್ಯಾಸಗೊಳಿಸಿರುವುದರಿಂದ ವಿದ್ಯಾರ್ಥಿಗಳು ಪುಸ್ತಕಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಇದು ವಿದ್ಯಾರ್ಥಿಗಳಿಗೆ ಒತ್ತಡವಿಲ್ಲದೇ ವಿಷಯವನ್ನು ಓದಲು ಸಹಾಯ ಮಾಡುತ್ತದೆ’ ಎಂದು ಹೇಳಿದರು.</p>.<p>ವಿಷಯ ಉಪನ್ಯಾಸಕರುಗಳಾದ ಕೇದಾರ ದೀಕ್ಷಿತ್, ಪ್ರಕಾಶ ಕಾಂತೀಕರ, ವೈಶಾಲಿ ದೇಶಪಾಂಡೆ, ಡಿ ಕೊಂಡಲರಾವ್ ಪುಸ್ತಕ ಕುರಿತು ಅನಿಸಿಕೆಗಳನ್ನು ಹೇಳಿದರು.</p>.<p>ವಿದ್ಯಾರ್ಥಿನಿಯರಾದ ತ್ರಿವೇಣಿ, ವರ್ಷಾ, ವಾಣಿಶ್ರೀ ಮತ್ತು ಅಂಬಿಕಾ ಪ್ರಾರ್ಥನೆ ಗೀತೆ ಹಾಡಿದರು.</p>.<p>ನಿರೂಪಣೆಯನ್ನು ಮಳೇಂದ್ರ ಹಿರೇಮಠ ನಡೆಸಿಕೊಟ್ಟರು. ಚಂದ್ರಭಾನು ವಂದನಾರ್ಪಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>