<p><strong>ಕಲಬುರ್ಗಿ: </strong>ಚಿತ್ತಾಪುರ ತಾಲ್ಲೂಕಿನ ನಾಲವಾರ ವಲಯದ ಲಾಡ್ಲಾಪುರ ಮತ್ತು ಹಣ್ಣಿಕೇರಾ ಗ್ರಾಮಗಳ ಪಂಪ್ಸೆಟ್ಗಳಿಗೆ ಮಾರ್ಚ್ ತಿಂಗಳವರೆಗೆ ನಿತ್ಯ 12 ಗಂಟೆ ವಿದ್ಯುತ್ ನೀಡಬೇಕು ಎಂದು ಒತ್ತಾಯಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಇಲ್ಲಿನ ಜೆಸ್ಕಾಂ ಕೇಂದ್ರ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಎರಡೂ ಗ್ರಾಮಗಳ ರೈತರು ಶೇಂಗಾ ಬೆಳೆಯುತ್ತಿದ್ದು, ಏಳು ಗಂಟೆ ವಿದ್ಯುತ್ ಸಾಕಾಗುತ್ತಿಲ್ಲ. ಆದ್ದರಿಂದ ಕನಿಷ್ಠ 12 ಗಂಟೆ ವಿದ್ಯುತ್ ಪೂರೈಸಬೇಕು. ಅದರಲ್ಲೂ ರಾತ್ರಿ ಪಾಳಿ, ಹಗಲು ಪಾಳಿಯಂತೆ ವಿದ್ಯುತ್ ಕೊಡುತ್ತಿರುವುದರಿಂದ ರೈತರಿಗೆ ಕಷ್ಟವಾಗುತ್ತಿದೆ. ಈ ಬಾರಿ ಕೊಳವೆಬಾವಿ ಆಶ್ರಿತ ರೈತರು ಹೆಚ್ಚು ಶೇಂಗಾ ಬೆಳೆದಿದ್ದು, ರಾತ್ರಿ ಪಾಳಿಯಲ್ಲಿ ಬಿಡುತ್ತಿರುವ ಏಳು ಗಂಟೆ ವಿದ್ಯುತ್ ಸಾಕಾಗುತ್ತಿಲ್ಲ. ಹಾಗಾಗಿ ಹೆಚ್ಚುವರಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಆರ್ಕೆಎಸ್ ಜಿಲ್ಲಾ ಕಾರ್ಯದರ್ಶಿ ಮಹೇಶ ಎಸ್.ಬಿ., ರೈತರಾದ ಗುಂಡಣ್ಣಾ, ಮಲ್ಲಿಕಾರ್ಜುನ, ಶರಣಪ್ಪ, ಅನಿಲ್ಗೌಡ, ಬಸವರಾಜ, ರಮೇಶ, ಬನ್ನಪ್ಪ ಸಾಹುಕಾರ, ಸಾಬಣ್ಣ, ಮಲ್ಲಣ್ಣ ದಾಡಭಾ, ಭೀಮರಾಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಚಿತ್ತಾಪುರ ತಾಲ್ಲೂಕಿನ ನಾಲವಾರ ವಲಯದ ಲಾಡ್ಲಾಪುರ ಮತ್ತು ಹಣ್ಣಿಕೇರಾ ಗ್ರಾಮಗಳ ಪಂಪ್ಸೆಟ್ಗಳಿಗೆ ಮಾರ್ಚ್ ತಿಂಗಳವರೆಗೆ ನಿತ್ಯ 12 ಗಂಟೆ ವಿದ್ಯುತ್ ನೀಡಬೇಕು ಎಂದು ಒತ್ತಾಯಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಇಲ್ಲಿನ ಜೆಸ್ಕಾಂ ಕೇಂದ್ರ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಎರಡೂ ಗ್ರಾಮಗಳ ರೈತರು ಶೇಂಗಾ ಬೆಳೆಯುತ್ತಿದ್ದು, ಏಳು ಗಂಟೆ ವಿದ್ಯುತ್ ಸಾಕಾಗುತ್ತಿಲ್ಲ. ಆದ್ದರಿಂದ ಕನಿಷ್ಠ 12 ಗಂಟೆ ವಿದ್ಯುತ್ ಪೂರೈಸಬೇಕು. ಅದರಲ್ಲೂ ರಾತ್ರಿ ಪಾಳಿ, ಹಗಲು ಪಾಳಿಯಂತೆ ವಿದ್ಯುತ್ ಕೊಡುತ್ತಿರುವುದರಿಂದ ರೈತರಿಗೆ ಕಷ್ಟವಾಗುತ್ತಿದೆ. ಈ ಬಾರಿ ಕೊಳವೆಬಾವಿ ಆಶ್ರಿತ ರೈತರು ಹೆಚ್ಚು ಶೇಂಗಾ ಬೆಳೆದಿದ್ದು, ರಾತ್ರಿ ಪಾಳಿಯಲ್ಲಿ ಬಿಡುತ್ತಿರುವ ಏಳು ಗಂಟೆ ವಿದ್ಯುತ್ ಸಾಕಾಗುತ್ತಿಲ್ಲ. ಹಾಗಾಗಿ ಹೆಚ್ಚುವರಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಆರ್ಕೆಎಸ್ ಜಿಲ್ಲಾ ಕಾರ್ಯದರ್ಶಿ ಮಹೇಶ ಎಸ್.ಬಿ., ರೈತರಾದ ಗುಂಡಣ್ಣಾ, ಮಲ್ಲಿಕಾರ್ಜುನ, ಶರಣಪ್ಪ, ಅನಿಲ್ಗೌಡ, ಬಸವರಾಜ, ರಮೇಶ, ಬನ್ನಪ್ಪ ಸಾಹುಕಾರ, ಸಾಬಣ್ಣ, ಮಲ್ಲಣ್ಣ ದಾಡಭಾ, ಭೀಮರಾಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>