ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಎಸ್. ಸುನೀತ್ಕುಮಾರ್, ಕಾರ್ಯದರ್ಶಿ ಎಚ್.ವಿ.ದಿವಾಕರ, ‘ಲಾಕ್ ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಹಲವಾರು ರಾಜ್ಯಗಳನ್ನೊಳಗೊಂಡು ಬೆಂಗಳೂರು, ಮುಂಬೈ, ಹೈದರಾಬಾದ್, ಪುಣೆ ಹೀಗೆ ಮಹಾ ನಗರಗಳಿಗೆ ವಲಸೆ ಹೋಗಿರುವ ಸಾವಿರಾರು ಕಾರ್ಮಿಕರು ಮತ್ತೆ ತಮ್ಮ ತಮ್ಮ ಹಳ್ಳಿಗಳಿಗೆ ಹಿಂತಿರುಗುತ್ತಿದ್ದಾರೆ. ಇನ್ನು ಮುಂದಿನ ಜೀವನ ಹೇಗೆ? ಒಪ್ಪತ್ತಿನ ಊಟಕ್ಕೆ ಏನು ಮಾಡಬೇಕು? ಎಂದು ಈ ಕಾರ್ಮಿಕರು ಆತಂಕದಲ್ಲಿದ್ದಾರೆ. ಮುಂದಿನ ದಿನಗಳ ಕುರಿತು ಭಯದಲ್ಲಿರುವ ಇವರಿಗೆ ರಾಜ್ಯ ಸರ್ಕಾರವು ಮತ್ತೊಂದು ಆಘಾತವನ್ನು ನೀಡಿದೆ’ ಎಂದು ಟೀಕಿಸಿದ್ದಾರೆ.