ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಹವಾಮಾನ ವೈಪರೀತ್ಯದಿಂದಾಗಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಶೇಂಗಾ, ರಾಗಿ, ಜೋಳ, ತೊಗರಿ, ಮೆಣಸಿನಕಾಯಿ, ತರಕಾರಿ, ತೆಂಗು, ಅಡಿಕೆ, ಮೆಣಸಿನ ಬೆಳೆಗಳು ಸಂಪೂರ್ಣ ನಾಶವಾಗಿವೆ. ತೋಟಗಾರಿಕೆಯ ಬೆಳೆಗಳು ನಿಂತ ನೀರಿನಲ್ಲೇ ಕೊಳೆಯುತ್ತಿವೆ. ಹಸಿಬರದಿಂದಾಗಿ ಮುಂದಿನ ದಿನಗಳಲ್ಲಿ ಮೇವಿನ ಕೊರತೆ ತೀವ್ರವಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.