‘ನಾಲ್ಕೈದು ದಿನಗಳ ಹಿಂದೆಯೇ ಕಲಬುರಗಿಯಿಂದ ರೈಲಿನ ಮುಖಾಂತರ ವಾರಣಾಸಿಗೆ ತೆರಳಿದ್ದರು. ಅಲ್ಲಿಂದ ಟಿಟಿ ಮಾಡಿಕೊಂಡು ಅಯೋಧ್ಯೆ ರಾಮಲಲ್ಲಾನ ದರ್ಶನಕ್ಕೆ ಹೋಗುತ್ತಿದ್ದರು. ಅಯೋಧ್ಯೆಯ 30 ಕಿ.ಮೀ. ಅಂತರದಲ್ಲಿ ಅಪಘಾತ ಸಂಭವಿಸಿದ್ದು, ಮೂರ್ನಾಲ್ಕು ಜನ ಮೃತಪಟ್ಟಿದ್ದಾಗಿ ಮಾಹಿತಿ ಇದೆ. ಆದರೆ, ಅವರ ಹೆಸರು ಸ್ಪಷ್ಟವಾಗಿ ಗೊತ್ತಾಗಿಲ್ಲ. ಆಸ್ಪತ್ರೆಗೆ ಹೋದ ಬಳಿಕವೇ ತಿಳಿಯಲಿದೆ’ ಎಂದು ಗಾಯಾಳು ಸಂಬಂಧ ನಿಜಲಿಂಗಪ್ಪ ಹೇಳಿದರು.