‘ಫಿರೋಜಾಬಾದ್ ಸುತ್ತಲಿನ ಭೀಮಾ ತೀರದಲ್ಲಿ ಕೆಆರ್ಡಿಎಲ್ ಹೆಸರಿನಲ್ಲಿ, ಸಂಸ್ಥೆಯ ಕೆಲ ಅಧಿಕಾರಿಗಳು ಸೇರಿಕೊಂಡು ಅಕ್ರಮ ಮರಳು ಸಾಗಣೆ ಮಾಡುತ್ತಿದ್ದಾರೆ ಎಂಬ ದೂರುಗಳ ಬಂದಿವೆ. ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಬಂದಿದ್ದು, ಈ ಕುರಿತು ಇಲಾಖೆ ತನಿಖೆ ನಡೆಸಿ ವಾರದಲ್ಲಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತಪ್ಪಿತಸ್ಥ ಅಧಿಕಾರಿಗಳನ್ನು ಸುಮ್ಮನೇ ಬಿಡುವುದಿಲ್ಲ’ ಎಂದು ಅವರು ಹೇಳಿದರು.