ರಸ್ತೆ ನಿರ್ಮಾಣಕ್ಕೆ ಕೋಟಿ ಕೋಟಿ ಖರ್ಚಾದರೂ ಗುಣಮಟ್ಟದ ರಸ್ತೆ ಆಗದ ಕಾರಣ ಅಲ್ಲಲ್ಲಿ ರಸ್ತೆ ಹಾಳಾಗುತ್ತಿದೆ. ರಸ್ತೆ ನಿರ್ಮಾಣಕ್ಕಾಗಿ ಹಲವಾರು ವರ್ಷಗಳಿಂದ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ, ಪ್ರತಿಭಟನೆ, ಉಪವಾಸ ಸತ್ಯಾಗ್ರಹ ಮಾಡಿದ ಮೇಲೆ ಸರ್ಕಾರ ಮಣಿದು ಅನುದಾನ ನೀಡಿ ರಸ್ತೆ ನಿರ್ಮಾಣ ಮಾಡಿದೆ. ಆದರೆ ಗುತ್ತಿಗೆದಾರರ, ಇಲಾಖೆ ಅಧಿಕಾರಿಗಳ, ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ರಸ್ತೆ ಹಾಳಾಗಿ ಹೋಗಿದೆ ಎಂದು ಸಾರ್ವಜನಿಕರು ನಿತ್ಯ ಆಡಿಕೊಳ್ಳುವಂತಾಗಿದೆ.