‘ಕೊರವಿ ಗಾಂಧಿನಗರ ತಾಂಡಾದ ಮಿಥುನ ಚವ್ಹಾಣ ಮತ್ತು ಸುನೀಲ ಜಾಧವ್ ಅವರನ್ನು ಬಂಧಿಸಲಾಗಿದೆ. ₹ 2 ಲಕ್ಷ ಮೌಲ್ಯದ ವಸ್ತುಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಹೊಡೇಬೀರನಹಳ್ಳಿ, ಕೊರವಿ, ಕುಡಳ್ಳಿ ಗ್ರಾಮ ರೈತರ ಹೊಲಗಳಲ್ಲಿ ಮತ್ತು ಸವಳು ಮಣ್ಣಿನ ಕೈಗಾರಿಕೆಗಳಲ್ಲಿ ಕಳವು ಮಾಡಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ’ ಎಂದು ಸಿಪಿಐ ಕೆ.ಜಿ.ಜಗದೀಶ ತಿಳಿಸಿದರು.