ಕಲಬುರ್ಗಿ: ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಆರು ತಿಂಗಳ ಹಿಂದೆ ಜಾಮೀನು ಪಡೆದು ಹೊರಬಂದಿದ್ದ ರೌಡಿ ಶೀಟರ್ ಶ್ರೀಕಾಂತ (28) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಇಲ್ಲಿನ ರಾಮನಗರದ ಬಯಲು ಜಾಗಕ್ಕೆ ಶ್ರೀಕಾಂತನನ್ನು ಶನಿವಾರ ಬೆಳಿಗ್ಗೆ ಕರೆದೊಯ್ದು ಆತನಿಗೆ ಮದ್ಯ ಕುಡಿಸಿದ್ದಾರೆ. ಮತ್ತೇರಿದ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ.