<p><strong>ಚಿತ್ತಾಪುರ:</strong> ಕಳೆದೊಂದು ಒಂದು ತಿಂಗಳಿನಿಂದ ತೀವ್ರ ಗಮನ ಸೆಳೆದಿದ್ದ ಮತ್ತು ಚರ್ಚೆಗೆ ಕಾರಣವಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನವು ಭಾನುವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ಶಾಂತಿಯುತವಾಗಿ ಸಂಪನ್ನಗೊಂಡಿತು.</p>.<p>ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರ ಪಟ್ಟಣದಲ್ಲಿ ಆರ್ಎಸ್ಎಸ್ ಗಣವೇಷಧಾರಿಗಳು ಪೊಲೀಸರ ಸರ್ಪಗಾವಲಿನ ನಡುವೆ ತನ್ನ 'ಸಂಘದ ಬಲ' ಪ್ರದರ್ಶಿಸಿದರು.</p>.<p>ಪಥಸಂಚಲನಕ್ಕೆ ಜಿಲ್ಲಾಡಳಿತ ನೀಡಿದ್ದ ಷರತ್ತುಬದ್ಧ ಅನುಮತಿಯಂತೆ 300 ಗಣವೇಷಧಾರಿಗಳು ಹಾಗೂ 50 ಘೋಷ್ ವಾದಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<p>ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಿಂದ ಪ್ರಾರಂಭವಾದ ಆರ್ ಎಸ್ ಎಸ್ ಪಥ ಸಂಚಲನ ವೀಕ್ಷಿಸಲು ಚಿತ್ತಾಪುರದ ರಸ್ತೆಗಳ ಇಕ್ಕೆಲಗಳಲ್ಲಿ ಜನತೆ ಕಿಕ್ಕಿರಿದು ಸೇರಿದ್ದರು. ಮಹಿಳೆಯರು ಸೇರಿದಂತೆ ಹಲವರು ಗಣವೇಷಧಾರಿಗಳ ಮೇಲೆ ಪುಷ್ಪದಳಗಳನ್ನು ಎರಚಿ ಗೌರವ ಅರ್ಪಿಸಿದರು.</p>.<p>ನೆರೆದಿದ್ದ ನೂರಾರು ಮಂದಿ 'ಭಾರತ ಮಾತಾಕೀ ಜೈ', 'ವಂದೇ ಮಾತರಂ' 'ಜೈ ಶ್ರೀರಾಮ', 'ಜೈ ಭವಾನಿ, ಜೈ ಶಿವಾಜಿ' ಎಂದು ಘೋಷಣೆ ಮೊಳಗಿಸಿದರು.</p>.<p>ನಿಗದಿತ ಪಟ್ಟಿದ್ದವರನ್ನು ಬಿಟ್ಟು ಗಣವೇಷ ಧರಿಸಿ ಬಂದಿದ್ದ ಇತರರನ್ನು ಪಥಸಂಚಲನದಲ್ಲಿ ಪಾಲ್ಗೊಳ್ಳದಂತೆ ಪೊಲೀಸರು ತಡೆದರು. ಮಾತ್ರವಲ್ಲ ಘೋಷಣೆ ಮೊಳಗಿಸುತ್ತಿದ್ದ ಯುವಕರನ್ನು ಪೊಲೀಸರು ತಡೆದು ಪಥಸಂಚಲನದ ಹಿಂದೆ ಬರುವಂತೆ ನೋಡಿಕೊಂಡರು.</p>.ಚಿತ್ತಾಪುರ| ಆರ್ಎಸ್ಎಸ್ ಪಥಸಂಚಲನ: ಗಣವೇಷಧಾರಿಗಳಿಗೆ ಜನರಿಂದ ಅದ್ದೂರಿ ಸ್ವಾಗತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ:</strong> ಕಳೆದೊಂದು ಒಂದು ತಿಂಗಳಿನಿಂದ ತೀವ್ರ ಗಮನ ಸೆಳೆದಿದ್ದ ಮತ್ತು ಚರ್ಚೆಗೆ ಕಾರಣವಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನವು ಭಾನುವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ಶಾಂತಿಯುತವಾಗಿ ಸಂಪನ್ನಗೊಂಡಿತು.</p>.<p>ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರ ಪಟ್ಟಣದಲ್ಲಿ ಆರ್ಎಸ್ಎಸ್ ಗಣವೇಷಧಾರಿಗಳು ಪೊಲೀಸರ ಸರ್ಪಗಾವಲಿನ ನಡುವೆ ತನ್ನ 'ಸಂಘದ ಬಲ' ಪ್ರದರ್ಶಿಸಿದರು.</p>.<p>ಪಥಸಂಚಲನಕ್ಕೆ ಜಿಲ್ಲಾಡಳಿತ ನೀಡಿದ್ದ ಷರತ್ತುಬದ್ಧ ಅನುಮತಿಯಂತೆ 300 ಗಣವೇಷಧಾರಿಗಳು ಹಾಗೂ 50 ಘೋಷ್ ವಾದಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<p>ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಿಂದ ಪ್ರಾರಂಭವಾದ ಆರ್ ಎಸ್ ಎಸ್ ಪಥ ಸಂಚಲನ ವೀಕ್ಷಿಸಲು ಚಿತ್ತಾಪುರದ ರಸ್ತೆಗಳ ಇಕ್ಕೆಲಗಳಲ್ಲಿ ಜನತೆ ಕಿಕ್ಕಿರಿದು ಸೇರಿದ್ದರು. ಮಹಿಳೆಯರು ಸೇರಿದಂತೆ ಹಲವರು ಗಣವೇಷಧಾರಿಗಳ ಮೇಲೆ ಪುಷ್ಪದಳಗಳನ್ನು ಎರಚಿ ಗೌರವ ಅರ್ಪಿಸಿದರು.</p>.<p>ನೆರೆದಿದ್ದ ನೂರಾರು ಮಂದಿ 'ಭಾರತ ಮಾತಾಕೀ ಜೈ', 'ವಂದೇ ಮಾತರಂ' 'ಜೈ ಶ್ರೀರಾಮ', 'ಜೈ ಭವಾನಿ, ಜೈ ಶಿವಾಜಿ' ಎಂದು ಘೋಷಣೆ ಮೊಳಗಿಸಿದರು.</p>.<p>ನಿಗದಿತ ಪಟ್ಟಿದ್ದವರನ್ನು ಬಿಟ್ಟು ಗಣವೇಷ ಧರಿಸಿ ಬಂದಿದ್ದ ಇತರರನ್ನು ಪಥಸಂಚಲನದಲ್ಲಿ ಪಾಲ್ಗೊಳ್ಳದಂತೆ ಪೊಲೀಸರು ತಡೆದರು. ಮಾತ್ರವಲ್ಲ ಘೋಷಣೆ ಮೊಳಗಿಸುತ್ತಿದ್ದ ಯುವಕರನ್ನು ಪೊಲೀಸರು ತಡೆದು ಪಥಸಂಚಲನದ ಹಿಂದೆ ಬರುವಂತೆ ನೋಡಿಕೊಂಡರು.</p>.ಚಿತ್ತಾಪುರ| ಆರ್ಎಸ್ಎಸ್ ಪಥಸಂಚಲನ: ಗಣವೇಷಧಾರಿಗಳಿಗೆ ಜನರಿಂದ ಅದ್ದೂರಿ ಸ್ವಾಗತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>