<p><strong>ಕಲಬುರಗಿ:</strong> ರಾಜ್ಯದ ಗಮನ ಸೆಳೆದಿರುವ ‘ಚಿತ್ತಾಪುರ ಪಥಸಂಚಲನ’ ಕುರಿತ ಅರ್ಜಿ ಹೈಕೋರ್ಟ್ನ ಕಲಬುರಗಿ ಪೀಠದಲ್ಲಿ ಶುಕ್ರವಾರ ಮತ್ತೆ ವಿಚಾರಣೆಗೆ ಬರಲಿದ್ದು, ಎಲ್ಲರ ಚಿತ್ತ ಇದೀಗ ಹೈಕೋರ್ಟ್ ಆದೇಶದತ್ತ ನೆಟ್ಟಿದೆ.</p>.<p>‘ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ ನೀಡುವ ಸಂಬಂಧ ನ.5ರಂದು ಮತ್ತೊಮ್ಮೆ ಶಾಂತಿ ಸಭೆ ನಡೆಸಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕು’ ಎಂದು ಹೈಕೋರ್ಟ್ ಅ.30ರ ವಿಚಾರಣೆ ವೇಳೆ ಹೇಳಿತ್ತು. ಅದರಂತೆ ನ.5ರಂದು ಬೆಂಗಳೂರಿನಲ್ಲಿ ಸರ್ಕಾರದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ ಕಚೇರಿಯಲ್ಲಿ ಶಾಂತಿಸಭೆ ನಡೆದಿತ್ತು.</p>.<p>ಸಭೆಯಲ್ಲಿ ಆರ್ಎಸ್ಎಸ್ ಪರ ಅರ್ಜಿದಾರ ಚಿಂಚೋಳಿಯ ಅಶೋಕ ಪಾಟೀಲ ನೇತೃತ್ವದ ತಂಡ ಹಾಗೂ ವಕೀಲರು ತಮ್ಮ ನಿಲುವನ್ನು ಪ್ರತಿಪಾದಿಸಿದ್ದರು. ‘ನ.13 ಅಥವಾ ನ.16ರಂದು ಪಥಸಂಚಲನ ನಡೆಸಲು ಅವಕಾಶ ನೀಡಬೇಕು. ಜಿಲ್ಲಾಡಳಿತ ವಿಧಿಸುವ ಷರತ್ತು ಪಾಲಿಸಲಾಗುವುದು’ ಎಂದು ಸಭೆಯಲ್ಲಿ ಹೇಳಿದ್ದರು.</p>.<p>ಶುಕ್ರವಾರದ ವಿಚಾರಣೆಯಲ್ಲಿ 2ನೇ ಸುತ್ತಿನ ಶಾಂತಿ ಸಭೆಯ ವರದಿಯನ್ನು ಸರ್ಕಾರವು ನ್ಯಾಯಾಲಯಕ್ಕೆ ಸಲ್ಲಿಸಲಿದೆ. ಬಳಿಕ ನ್ಯಾಯಾಲಯ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಸಂಬಂಧ ಏನು ನಿರ್ಧಾರ ಪ್ರಕಟಿಸಬಹುದು ಎಂಬ ಕುತೂಹಲ ಗರಿಗೆದರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ರಾಜ್ಯದ ಗಮನ ಸೆಳೆದಿರುವ ‘ಚಿತ್ತಾಪುರ ಪಥಸಂಚಲನ’ ಕುರಿತ ಅರ್ಜಿ ಹೈಕೋರ್ಟ್ನ ಕಲಬುರಗಿ ಪೀಠದಲ್ಲಿ ಶುಕ್ರವಾರ ಮತ್ತೆ ವಿಚಾರಣೆಗೆ ಬರಲಿದ್ದು, ಎಲ್ಲರ ಚಿತ್ತ ಇದೀಗ ಹೈಕೋರ್ಟ್ ಆದೇಶದತ್ತ ನೆಟ್ಟಿದೆ.</p>.<p>‘ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ ನೀಡುವ ಸಂಬಂಧ ನ.5ರಂದು ಮತ್ತೊಮ್ಮೆ ಶಾಂತಿ ಸಭೆ ನಡೆಸಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕು’ ಎಂದು ಹೈಕೋರ್ಟ್ ಅ.30ರ ವಿಚಾರಣೆ ವೇಳೆ ಹೇಳಿತ್ತು. ಅದರಂತೆ ನ.5ರಂದು ಬೆಂಗಳೂರಿನಲ್ಲಿ ಸರ್ಕಾರದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ ಕಚೇರಿಯಲ್ಲಿ ಶಾಂತಿಸಭೆ ನಡೆದಿತ್ತು.</p>.<p>ಸಭೆಯಲ್ಲಿ ಆರ್ಎಸ್ಎಸ್ ಪರ ಅರ್ಜಿದಾರ ಚಿಂಚೋಳಿಯ ಅಶೋಕ ಪಾಟೀಲ ನೇತೃತ್ವದ ತಂಡ ಹಾಗೂ ವಕೀಲರು ತಮ್ಮ ನಿಲುವನ್ನು ಪ್ರತಿಪಾದಿಸಿದ್ದರು. ‘ನ.13 ಅಥವಾ ನ.16ರಂದು ಪಥಸಂಚಲನ ನಡೆಸಲು ಅವಕಾಶ ನೀಡಬೇಕು. ಜಿಲ್ಲಾಡಳಿತ ವಿಧಿಸುವ ಷರತ್ತು ಪಾಲಿಸಲಾಗುವುದು’ ಎಂದು ಸಭೆಯಲ್ಲಿ ಹೇಳಿದ್ದರು.</p>.<p>ಶುಕ್ರವಾರದ ವಿಚಾರಣೆಯಲ್ಲಿ 2ನೇ ಸುತ್ತಿನ ಶಾಂತಿ ಸಭೆಯ ವರದಿಯನ್ನು ಸರ್ಕಾರವು ನ್ಯಾಯಾಲಯಕ್ಕೆ ಸಲ್ಲಿಸಲಿದೆ. ಬಳಿಕ ನ್ಯಾಯಾಲಯ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಸಂಬಂಧ ಏನು ನಿರ್ಧಾರ ಪ್ರಕಟಿಸಬಹುದು ಎಂಬ ಕುತೂಹಲ ಗರಿಗೆದರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>