<p><strong>ಕಲಬುರಗಿ:</strong> ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕೆ ನ.2ರಂದು ಅವಕಾಶ ನೀಡುವ ಕುರಿತ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠವು ಅ.28ರಂದು ಎಲ್ಲ ಸಂಘಟನೆಗಳೊಂದಿಗೆ ಶಾಂತಿ ಸಭೆಯನ್ನು ನಡೆಸಿ, ಅದರ ವರದಿಯನ್ನು ಅ.30ರಂದು ಸಲ್ಲಿಸಬೇಕು ಎಂದು ನಿರ್ದೇಶನ ನೀಡಿತು.</p>.ಚಿತ್ತಾಪುರ: ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ.<p>ನ್ಯಾಯಮೂರ್ತಿ ಎಂಜಿಎಸ್ ಕಮಲ ಅವರು ಅರ್ಜಿ ವಿಚಾರಣೆ ನಡೆಸಿದರು.</p><p> ಸರ್ಕಾರದ ಪರವಾಗಿ ಆನ್ಲೈನ್ ಮೂಲಕ ಹಾಜರಾದ ಅಡ್ವೊಕೇಟ್ ಜನರಲ್ ಶಶಿಕಿರಣ ಶೆಟ್ಟಿ ವಾದ ಮಂಡಿಸಿದರು. ಜಿಲ್ಲೆ ಹಾಗೂ ಚಿತ್ತಾಪುರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಈ ಅರ್ಜಿಗಳ ನಿರ್ಧರಿಸಲು ಇನ್ನೆರಡು ವಾರಗಳ ಕಾಲ ಸಮಯ ನೀಡಬೇಕು ಎಂದು ಕೋರಿದರು.</p><p>ಇದಕ್ಕೆ ಅರ್ಜಿದಾರರ ಪರ ವಕೀಲ ಅರುಣ ಶಾಮ್, ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಸಮಸ್ಯೆ ಹೇಳುತ್ತಾ ಕಾಲಹರಣ ಮಾಡುತ್ತಿದೆ. ಸಮಸ್ಯೆ ಎದುರಾದರೆ ಕೇಂದ್ರದ ಭದ್ರತಾ ಪಡೆಗಳ ನೆರವು ಪಡೆಯಲಿ ಎಂದು ವಾದಿಸಿದರು.</p>.ಪ್ರಿಯಾಂಕ್ಗೆ ಬೆದರಿಕೆ: ಕಾಂಗ್ರೆಸ್ನಿಂದ ಪ್ರತಿಭಟನೆ, ಚಿತ್ತಾಪುರ ಬಂದ್ ಯಶಸ್ವಿ.<p>ಇದಕ್ಕೆ ಪ್ರತಿಕ್ರಿಯಿಸಿದ ಎಜಿ ಶಶಿಕಿರಣ ಶೆಟ್ಟಿ, ಈ ಅರ್ಜಿಯನ್ನು ಸರ್ಕಾರ ತಿರಸ್ಕರಿಸಿಲ್ಲ. ಬದಲಿಗೆ ಪರಿಶೀಲನೆ ನಡೆಸುತ್ತಿದೆ. ಇನ್ನಷ್ಟು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.</p><p>'ಪ್ರಕರಣದ ಸೂಕ್ಷ್ಮತೆ ಕೋರ್ಟ್ ಗಮನಕ್ಕಿದೆ' ಎಂದ ನ್ಯಾಯಮೂರ್ತಿ ಎಂಜಿಎಸ್ ಕಮಲ, 'ಈ ಪ್ರಕರಣದಲ್ಲಿ ಶಾಂತಿಸ್ಥಾಪನೆ ನಿಟ್ಟಿನಲ್ಲಿ ಯಾವಾಗ ಸಭೆ ನಡೆಸುತ್ತೀರಿ' ಎಂದು ಪ್ರಶ್ನಿಸಿದರು.</p>.ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ ಖಂಡಿಸಿ ಚಿತ್ತಾಪುರ ಬಂದ್.<p>ಅದಕ್ಕೆ ಶಶಿಕಿರಣ ಶೆಟ್ಟಿ ಅವರು ಶೀಘ್ರವೇ ಸಭೆ ನಡೆಸಲಾಗುವುದು ಎಂದರು.</p><p>ಆಗ ಮಧ್ಯ ಪ್ರವೇಶಿಸಿದ ಕೋರ್ಟ್, ಅ.28ರಂದು ಜಿಲ್ಲಾ ಕೇಂದ್ರದಲ್ಲಿ ಎಲ್ಲ ಸಂಘಟನೆಗಳೊಂದಿಗೆ ಶಾಂತಿ ಸಭೆ ನಡೆಸಿ, ಅದರ ವರದಿಯನ್ನು ಅಕ್ಟೋಬರ್ 30ರಂದು ಸಲ್ಲಿಸಿ ಎಂದು ನಿರ್ದೇಶನ ನೀಡಿದರು.</p><p>ಅಲ್ಲದೇ 'ಈ ಪ್ರಕರಣವನ್ನು ಎಳೆಯುತ್ತಾ ಹೋಗಬೇಡಿ, ಆದಷ್ಟು ಶೀಘ್ರ ಇತ್ಯರ್ಥಕ್ಕೆ ಪ್ರಯತ್ನಿಸಿ' ಎಂದು ಸಲಹೆ ನೀಡಿತು.</p>.ಚಿತ್ತಾಪುರದಲ್ಲಿ ನ.2ಕ್ಕೆ ಆರ್ಎಸ್ಎಸ್ ಪಥಸಂಚಲನ: ವರದಿಗೆ ಹೈಕೋರ್ಟ್ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕೆ ನ.2ರಂದು ಅವಕಾಶ ನೀಡುವ ಕುರಿತ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠವು ಅ.28ರಂದು ಎಲ್ಲ ಸಂಘಟನೆಗಳೊಂದಿಗೆ ಶಾಂತಿ ಸಭೆಯನ್ನು ನಡೆಸಿ, ಅದರ ವರದಿಯನ್ನು ಅ.30ರಂದು ಸಲ್ಲಿಸಬೇಕು ಎಂದು ನಿರ್ದೇಶನ ನೀಡಿತು.</p>.ಚಿತ್ತಾಪುರ: ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ.<p>ನ್ಯಾಯಮೂರ್ತಿ ಎಂಜಿಎಸ್ ಕಮಲ ಅವರು ಅರ್ಜಿ ವಿಚಾರಣೆ ನಡೆಸಿದರು.</p><p> ಸರ್ಕಾರದ ಪರವಾಗಿ ಆನ್ಲೈನ್ ಮೂಲಕ ಹಾಜರಾದ ಅಡ್ವೊಕೇಟ್ ಜನರಲ್ ಶಶಿಕಿರಣ ಶೆಟ್ಟಿ ವಾದ ಮಂಡಿಸಿದರು. ಜಿಲ್ಲೆ ಹಾಗೂ ಚಿತ್ತಾಪುರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಈ ಅರ್ಜಿಗಳ ನಿರ್ಧರಿಸಲು ಇನ್ನೆರಡು ವಾರಗಳ ಕಾಲ ಸಮಯ ನೀಡಬೇಕು ಎಂದು ಕೋರಿದರು.</p><p>ಇದಕ್ಕೆ ಅರ್ಜಿದಾರರ ಪರ ವಕೀಲ ಅರುಣ ಶಾಮ್, ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಸಮಸ್ಯೆ ಹೇಳುತ್ತಾ ಕಾಲಹರಣ ಮಾಡುತ್ತಿದೆ. ಸಮಸ್ಯೆ ಎದುರಾದರೆ ಕೇಂದ್ರದ ಭದ್ರತಾ ಪಡೆಗಳ ನೆರವು ಪಡೆಯಲಿ ಎಂದು ವಾದಿಸಿದರು.</p>.ಪ್ರಿಯಾಂಕ್ಗೆ ಬೆದರಿಕೆ: ಕಾಂಗ್ರೆಸ್ನಿಂದ ಪ್ರತಿಭಟನೆ, ಚಿತ್ತಾಪುರ ಬಂದ್ ಯಶಸ್ವಿ.<p>ಇದಕ್ಕೆ ಪ್ರತಿಕ್ರಿಯಿಸಿದ ಎಜಿ ಶಶಿಕಿರಣ ಶೆಟ್ಟಿ, ಈ ಅರ್ಜಿಯನ್ನು ಸರ್ಕಾರ ತಿರಸ್ಕರಿಸಿಲ್ಲ. ಬದಲಿಗೆ ಪರಿಶೀಲನೆ ನಡೆಸುತ್ತಿದೆ. ಇನ್ನಷ್ಟು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.</p><p>'ಪ್ರಕರಣದ ಸೂಕ್ಷ್ಮತೆ ಕೋರ್ಟ್ ಗಮನಕ್ಕಿದೆ' ಎಂದ ನ್ಯಾಯಮೂರ್ತಿ ಎಂಜಿಎಸ್ ಕಮಲ, 'ಈ ಪ್ರಕರಣದಲ್ಲಿ ಶಾಂತಿಸ್ಥಾಪನೆ ನಿಟ್ಟಿನಲ್ಲಿ ಯಾವಾಗ ಸಭೆ ನಡೆಸುತ್ತೀರಿ' ಎಂದು ಪ್ರಶ್ನಿಸಿದರು.</p>.ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ ಖಂಡಿಸಿ ಚಿತ್ತಾಪುರ ಬಂದ್.<p>ಅದಕ್ಕೆ ಶಶಿಕಿರಣ ಶೆಟ್ಟಿ ಅವರು ಶೀಘ್ರವೇ ಸಭೆ ನಡೆಸಲಾಗುವುದು ಎಂದರು.</p><p>ಆಗ ಮಧ್ಯ ಪ್ರವೇಶಿಸಿದ ಕೋರ್ಟ್, ಅ.28ರಂದು ಜಿಲ್ಲಾ ಕೇಂದ್ರದಲ್ಲಿ ಎಲ್ಲ ಸಂಘಟನೆಗಳೊಂದಿಗೆ ಶಾಂತಿ ಸಭೆ ನಡೆಸಿ, ಅದರ ವರದಿಯನ್ನು ಅಕ್ಟೋಬರ್ 30ರಂದು ಸಲ್ಲಿಸಿ ಎಂದು ನಿರ್ದೇಶನ ನೀಡಿದರು.</p><p>ಅಲ್ಲದೇ 'ಈ ಪ್ರಕರಣವನ್ನು ಎಳೆಯುತ್ತಾ ಹೋಗಬೇಡಿ, ಆದಷ್ಟು ಶೀಘ್ರ ಇತ್ಯರ್ಥಕ್ಕೆ ಪ್ರಯತ್ನಿಸಿ' ಎಂದು ಸಲಹೆ ನೀಡಿತು.</p>.ಚಿತ್ತಾಪುರದಲ್ಲಿ ನ.2ಕ್ಕೆ ಆರ್ಎಸ್ಎಸ್ ಪಥಸಂಚಲನ: ವರದಿಗೆ ಹೈಕೋರ್ಟ್ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>