<p><strong>ಕಲಬುರಗಿ:</strong> ನಗರದ ಬ್ರಹ್ಮಪುರ ಬಡಾವಣೆಯ ದೇಶಮುಖ ವಾಡಾದಲ್ಲಿ ಆಷಾಢ ಏಕಾದಶಿ ಉತ್ಸವದ ಅಂಗವಾಗಿ ಗುರುಪೂರ್ಣಿಮೆಯ ಗುರುವಾರದಂದು ಭಕ್ತರ ಸಮ್ಮುಖದಲ್ಲಿ ರುಕ್ಮಿಣಿ– ಪಾಂಡುರಂಗ ವಿಠ್ಠಲ ರಥೋತ್ಸವ ಅದ್ದೂರಿಯಿಂದ ಜರುಗಿತು.</p>.<p>ದೇಶಮುಖ ಅವರ ಮನೆಯ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ರುಕ್ಮಿಣಿ– ಪಾಂಡುರಂಗ ವಿಠ್ಠಲ ಮೂರ್ತಿಗಳನ್ನು ಪಲ್ಲಕ್ಕಿ ಮೆರವಣಿಯಲ್ಲಿ ತರಲಾಯಿತು. ಅಲಂಕೃತವಾದ ರಥದಲ್ಲಿ ಮೂರ್ತಿಗಳನ್ನು ಇರಿಸಲಾಯಿತು. </p>.<p>‘ಪುಂಡಲೀಕ ವರದಾ ವಿಠ್ಠಲ’, ‘ರುಕ್ಮಿಣಿ ಪಾಂಡುರಂಗ ವಿಠ್ಠಲ’ ಎಂಬ ಜಯಘೋಷ, ವಾದ್ಯ ಮೇಳಗಳ ನಾದ, ಭಜನೆಯೊಂದಿಗೆ ಲಾಲಗೇರಿ ಕ್ರಾಸ್ನ ಹನುಮಾನ ದೇವಸ್ಥಾನದವರೆಗೆ ರಥವನ್ನು ಎಳೆಯಲಾಯಿತು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಾಪಸ್ ಮೂಲ ಸ್ಥಳಕ್ಕೆ ತಂದು ರಥವನ್ನು ನಿಲ್ಲಿಸಲಾಯಿತು.</p>.<p>ರಥೋತ್ಸವ ಮಾರ್ಗದಲ್ಲಿ ವಾರಿಕಾರ ಸಮಾಜ ಹಾಗೂ ಲಕ್ಷ್ಮಿ ಮಹಿಳಾ ಮಂಡಳಿಗಳ ಸದಸ್ಯರು ರುಕ್ಮಿಣಿ– ಪಾಂಡುರಂಗ ವಿಠ್ಠಲ ನಾಮಸ್ಮರಣೆಯ ಭಜನೆ ಹಾಡುಗಳನ್ನು ಹಾಡಿದರು. ಸಂಕೀರ್ತನೆ, ಹರಿವಾಣಿ ಸೇವೆಯೂ ಜರುಗಿದವು.</p>.<p>ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಎಸ್. ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಸೇರಿದಂತೆ ಹಲವರು ದೇವರ ದರ್ಶನ ಪಡೆದರು.</p>.<p>ದೇಶಮುಖ ಅವರ ಮನೆಯಂಗಳದಲ್ಲಿ ಪ್ರತಿಷ್ಠಾಪಿಸಲಾದ ವಿಠ್ಠಲನ ಮೂರ್ತಿಯ ದರ್ಶನವನ್ನು ಸಾವಿರಾರು ಭಕ್ತರು ಮಾಡಿದರು. ಪ್ರಮುಖರಾದ ಪಾಂಡುರಂಗ ದೇಶಮುಖ, ಅಭಿಜಿತ್ ದೇಶಮುಖ, ಅಂಬರೇಶ್ ದೇಶಮುಖ ಸೇರಿದಂತೆ ದೇಶಮುಖ ಪರಿವಾರದವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p><strong>ಗೋಪಾಲ ಕಾಲ:</strong> ಜುಲೈ 12ರಂದು ನಡೆಯುವ ಗೋಪಾಲ ಕಾಲ (ಮಡಿಕೆ ಒಡೆಯುವುದು) ಮತ್ತು ಗಜ ವಾಹನ ಮೆರವಣಿಗೆಯೊಂದಿಗೆ ಏಕದಾಶಿ ಉತ್ಸವವು ಸಂಪನ್ನಗೊಳ್ಳಲಿದೆ.</p>.<p>ಕಳೆದ ಆರು ದಿನಗಳಿಂದ ಪಲ್ಲಕ್ಕಿ ಉತ್ಸವ, ಗರುಡ ವಾಹನ, ಗಜ ವಾಹನ ಮೆರವಣಿಗೆ, ಪಾಂಡುರಂಗ ವಿಶೇಷ ಪೂಜೆ, ಕೃಷ್ಣಾವತಾರ ಪೂಜೆ, ಸುಧಾಮಂಗಳ ಕಾರ್ಯಕ್ರಮ, ದ್ವಾದಶಿ ವಿಶೇಷ ಪೂಜೆ, ಅಖಂಡ ಭಾಗವತ ಸಪ್ತಾಹ ಸೇರಿದಂತೆ ನಾನಾ ಧಾರ್ಮಿಕ ಕೈಂಕರ್ಯಗಳು ಜರುಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಬ್ರಹ್ಮಪುರ ಬಡಾವಣೆಯ ದೇಶಮುಖ ವಾಡಾದಲ್ಲಿ ಆಷಾಢ ಏಕಾದಶಿ ಉತ್ಸವದ ಅಂಗವಾಗಿ ಗುರುಪೂರ್ಣಿಮೆಯ ಗುರುವಾರದಂದು ಭಕ್ತರ ಸಮ್ಮುಖದಲ್ಲಿ ರುಕ್ಮಿಣಿ– ಪಾಂಡುರಂಗ ವಿಠ್ಠಲ ರಥೋತ್ಸವ ಅದ್ದೂರಿಯಿಂದ ಜರುಗಿತು.</p>.<p>ದೇಶಮುಖ ಅವರ ಮನೆಯ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ರುಕ್ಮಿಣಿ– ಪಾಂಡುರಂಗ ವಿಠ್ಠಲ ಮೂರ್ತಿಗಳನ್ನು ಪಲ್ಲಕ್ಕಿ ಮೆರವಣಿಯಲ್ಲಿ ತರಲಾಯಿತು. ಅಲಂಕೃತವಾದ ರಥದಲ್ಲಿ ಮೂರ್ತಿಗಳನ್ನು ಇರಿಸಲಾಯಿತು. </p>.<p>‘ಪುಂಡಲೀಕ ವರದಾ ವಿಠ್ಠಲ’, ‘ರುಕ್ಮಿಣಿ ಪಾಂಡುರಂಗ ವಿಠ್ಠಲ’ ಎಂಬ ಜಯಘೋಷ, ವಾದ್ಯ ಮೇಳಗಳ ನಾದ, ಭಜನೆಯೊಂದಿಗೆ ಲಾಲಗೇರಿ ಕ್ರಾಸ್ನ ಹನುಮಾನ ದೇವಸ್ಥಾನದವರೆಗೆ ರಥವನ್ನು ಎಳೆಯಲಾಯಿತು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಾಪಸ್ ಮೂಲ ಸ್ಥಳಕ್ಕೆ ತಂದು ರಥವನ್ನು ನಿಲ್ಲಿಸಲಾಯಿತು.</p>.<p>ರಥೋತ್ಸವ ಮಾರ್ಗದಲ್ಲಿ ವಾರಿಕಾರ ಸಮಾಜ ಹಾಗೂ ಲಕ್ಷ್ಮಿ ಮಹಿಳಾ ಮಂಡಳಿಗಳ ಸದಸ್ಯರು ರುಕ್ಮಿಣಿ– ಪಾಂಡುರಂಗ ವಿಠ್ಠಲ ನಾಮಸ್ಮರಣೆಯ ಭಜನೆ ಹಾಡುಗಳನ್ನು ಹಾಡಿದರು. ಸಂಕೀರ್ತನೆ, ಹರಿವಾಣಿ ಸೇವೆಯೂ ಜರುಗಿದವು.</p>.<p>ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಎಸ್. ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಸೇರಿದಂತೆ ಹಲವರು ದೇವರ ದರ್ಶನ ಪಡೆದರು.</p>.<p>ದೇಶಮುಖ ಅವರ ಮನೆಯಂಗಳದಲ್ಲಿ ಪ್ರತಿಷ್ಠಾಪಿಸಲಾದ ವಿಠ್ಠಲನ ಮೂರ್ತಿಯ ದರ್ಶನವನ್ನು ಸಾವಿರಾರು ಭಕ್ತರು ಮಾಡಿದರು. ಪ್ರಮುಖರಾದ ಪಾಂಡುರಂಗ ದೇಶಮುಖ, ಅಭಿಜಿತ್ ದೇಶಮುಖ, ಅಂಬರೇಶ್ ದೇಶಮುಖ ಸೇರಿದಂತೆ ದೇಶಮುಖ ಪರಿವಾರದವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p><strong>ಗೋಪಾಲ ಕಾಲ:</strong> ಜುಲೈ 12ರಂದು ನಡೆಯುವ ಗೋಪಾಲ ಕಾಲ (ಮಡಿಕೆ ಒಡೆಯುವುದು) ಮತ್ತು ಗಜ ವಾಹನ ಮೆರವಣಿಗೆಯೊಂದಿಗೆ ಏಕದಾಶಿ ಉತ್ಸವವು ಸಂಪನ್ನಗೊಳ್ಳಲಿದೆ.</p>.<p>ಕಳೆದ ಆರು ದಿನಗಳಿಂದ ಪಲ್ಲಕ್ಕಿ ಉತ್ಸವ, ಗರುಡ ವಾಹನ, ಗಜ ವಾಹನ ಮೆರವಣಿಗೆ, ಪಾಂಡುರಂಗ ವಿಶೇಷ ಪೂಜೆ, ಕೃಷ್ಣಾವತಾರ ಪೂಜೆ, ಸುಧಾಮಂಗಳ ಕಾರ್ಯಕ್ರಮ, ದ್ವಾದಶಿ ವಿಶೇಷ ಪೂಜೆ, ಅಖಂಡ ಭಾಗವತ ಸಪ್ತಾಹ ಸೇರಿದಂತೆ ನಾನಾ ಧಾರ್ಮಿಕ ಕೈಂಕರ್ಯಗಳು ಜರುಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>