ಸಿಐಟಿಯು ಸಂಚಾಲಕ ಚಂದ್ರಶೇಖರ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಚಿಕ್ಕ ಮೊಗವೀರ, ಸಿಐಟಿಯು ಜಿಲ್ಲಾ ಅಧ್ಯಕ್ಷ ಕೆ ಶಂಕರ್ ಮಾತನಾಡಿದರು. ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಂತೋಷ್ ಹೆಮ್ಮಾಡಿ ಮನವಿ ಓದಿದರು. ಕಾರ್ಯದರ್ಶಿ ಶಶಿಕಾಂತ್ ಸ್ವಾಗತಿಸಿದರು. ವಿಜೇಂದ್ರ ಕೋಣಿ ವಂದಿಸಿದರು.ಪ್ರತಿಭಟನಾ ಸಭೆಯ ಬಳಿಕ ಸಾವಿರಾರು ಸಂಖ್ಯೆಯಲ್ಲಿ ಕಟ್ಟಡ ಕಾರ್ಮಿಕರು ಪೇಟೆಯಲ್ಲಿ ಮೆರವಣಿಗೆ ನಡೆಸಿ, ಕಾರ್ಮಿಕ ನಿರೀಕ್ಷಕರ ಕಚೇರಿಗೆ ತೆರಳಿ, ಅಲ್ಲಿನ ಸಿಬ್ಬಂದಿ ಸಹನ ಅವರ ಮೂಲಕ ಕಾರ್ಮಿಕರ ಕಲ್ಯಾಣ ಮಂಡಳಿ ಜಂಟಿ ಕಾರ್ಯದರ್ಶಿ ಹಾಗೂ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಸಂತೋಷ ಭಂಡಾರಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ನೀಡಲಾಯಿತು.