ಸೇಡಂ: ‘ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರ ಕಡಿಮೆಯಾಗುತ್ತಿದೆ. ಪಾಲಕರು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು' ಎಂದು ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ ಅಭಿಪ್ರಾಯಪಟ್ಟರು.
ಪಟ್ಟಣದಲ್ಲಿ ಶುಕ್ರವಾರ ನಡೆದ 14ನೇ ಸೇಡಂ ಉತ್ಸವದಲ್ಲಿ ಅವರು ಮಾತನಾಡಿದರು.
ಉತ್ಸವ ಸಮಿತಿ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಮಾತನಾಡಿ, ಮಕ್ಕಳಲ್ಲಿಪ್ರತಿಭೆ ಅನಾವರಣಕ್ಕೆ ವೇದಿಕೆ ಬೇಕಿದೆ. ಶಾಲೆಯಲ್ಲಿನ ಶಿಕ್ಷಣದ ಜೊತೆಗೆ ಮನೆಯಲ್ಲಿ ಮಕ್ಕಳ ಮೇಲೆ ಪಾಲಕರು ನಿಗಾವಹಿಸಬೇಕು' ಎಂದರು.
ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸೇಡಂ ಉತ್ಸವ ಸಮಿತಿ ಕಾರ್ಯದರ್ಶಿ ನಾಗೀಂದ್ರಪ್ಪಡೊಳ್ಳಾ, ನಾಗರಿಕ ಸಮಿತಿ ಅಧ್ಯಕ್ಷ ಬಸವರಾಜ ರೇವಗೊಂಡ, ಸೇಡಂ ಪರಿವಾರ ಸಮಿತಿ ಅಧ್ಯಕ್ಷ ಅನಂತಯ್ಯ ಮುಸ್ತಾಜರ್,ಪುರಸಭೆ ಅಧ್ಯಕ್ಷೆ ಚನ್ನಮ್ಮ ಪಾಟೀಲ ಇದ್ದರು. ನಾಗೀಂದ್ರಪ್ಪ ಡೊಳ್ಳಾ ಸ್ವಾಗತಿಸಿದರು. ಜಗದೀಶ ಕಡಬಗಾಂವನಿರೂಪಿಸಿದರು.