<p><strong>ಕಲಬುರ್ಗಿ: </strong>‘ಅಪಾರ ಶ್ರಮ, ಶ್ರದ್ಧೆ ಮತ್ತು ತ್ಯಾಗದಿಂದ ಯಶಸ್ಸು ಸಾಧಿಸಿದವರ ಜೀವನ ಯುವಜನರಿಗೆ ಪ್ರೇರಣೆಯಾಗಬೇಕು’ ಎಂದು ಕಾಂಗ್ರೆಸ್ ಮುಖಂಡ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ನಗರದಲ್ಲಿ ನಡೆದ, ‘ಸಾಧಕರ ಮನದಾಳದ ಮಾತು’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದಿನ ಯುವಕರು ಪರಿಶ್ರಮದ ಹಾದಿಯನ್ನು ತುಳಿಯಲು ಹಿಂದೇಟು ಹಾಕುತ್ತಿದ್ದಾರೆ. ಅವರಿಗೆ ಸಾಧಕರು ಅನುಭವಿಸಿದ ಕಷ್ಟ, ಸಮಾಜ ಅವರಿಗೆ ನೀಡಿದ ಪ್ರೋತ್ಸಾಹದ ಕೆಲಸಗಳನ್ನು ತಿಳಿಸಿದರೆ ಅವರೂ ಕೂಡಾ ಸಾಧನೆಯ ಹಾದಿಯನ್ನು ಹಿಡಿಯುತ್ತಾರೆ. ಸಮಾಜದ ಏಳ್ಗೆಗಾಗಿ ಜೀವನವನ್ನು ಮುಡುಪಾಗಿಟ್ಟವರನ್ನು ಗುರುತಿಸುವ ಕೆಲಸವಾಗಬೇಕು’ ಎಂದರು.</p>.<p>‘ಪ್ರತಿಯೊಬ್ಬರ ಕೊಡುಗೆ ಇದ್ದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲಾ ಕ್ಷೇತ್ರಗಳಲ್ಲೂ ಸಾಧಕರು ಮೂಡಿಬರಬೇಕು. ಅವರ ಸಾಧನೆಯ ಕತೆಗಳನ್ನು ದಾಖಲೀಕರಿಸಿ, ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕಿದೆ. ಈ ಭಾಗದ ಸಾಧಕರ ಮನದಾಳದ ಮಾತುಗಳನ್ನು ಪುಸ್ತಕ ರೂಪದಲ್ಲಿ ಹೊರತಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ’ ಎಂದರು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ಮಾತನಾಡಿ, ‘ಕಲ್ಯಾಣ ಕರ್ನಾಟಕದಲ್ಲಿ ಸಾಧನೆ ಮಾಡಿದವರು ಸಾಕಷ್ಟು ಜನರು ಇದ್ದಾರೆ. ಆದರೆ ಅವರ ಸಾಧನೆಯನ್ನು ದಾಖಲೀಕರಣ ಮಾಡುವ ಪ್ರಯತ್ನಗಳು ನಡೆಯುತ್ತಿಲ್ಲ’ ಎಂದರು.</p>.<p>‘ಜಿಲ್ಲೆಯ ವಿವಿಧ ಕ್ಷೇತ್ರಗಳ 25 ಸಾಧಕರ ಯಶೋಗಾಥೆಯನ್ನು ತಿಳಿಸುವ ಪ್ರಯತ್ನ ಕೃತಿಯಲ್ಲಿದೆ. ಬಾಲ್ಯ ಜೀವನ, ಸಂಕಷ್ಟದ ದಿನಗಳ ಮೆಲುಕು, ಶಿಕ್ಷಣ, ಉದ್ಯೋಗ ಕುರಿತು ಸಾಧಕರ ಮಾತುಗಳನ್ನು ಬರಹ ರೂಪದಲ್ಲಿ ಇಳಿಸಲಾಗಿದೆ. ಮುಂಬರುವ ದಿನಗಳಲ್ಲಿ ಈ ಭಾಗದ ಮತ್ತಷ್ಟು ಸಾಧಕರನ್ನು ಪರಿಚಯಿಸುವ ಕೆಲಸ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಹಾರಕೂಡ ಚನ್ನಬಸೇಶ್ವರ ಸಂಸ್ಥಾನ ಹಿರೇಮಠದ ಚನ್ನವೀರ ಶಿವಾಚಾರ್ಯರು ಕೃತಿ ಬಿಡುಗಡೆ ಮಾಡಿದರು. ಸಾಹಿತಿ ಪ್ರೊ.ಕಲ್ಯಾಣರಾವ ಪಾಟೀಲ ಅವರು ಕೃತಿ ಪರಿಚಯಿಸಿದರು.</p>.<p>ನಂತರ ಸಾಧಕರು ಮತ್ತು ಅವರ ಕುಟುಂಬದ ಸದಸ್ಯರನ್ನು ಸನ್ಮಾನಿಸಲಾಯಿತು.</p>.<p>ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿಗಳಾದ ವಿಜಯಕುಮಾರ ಪರುತೆ, ಮಡಿವಾಳಪ್ಪ ನಾಗರಹಳ್ಳಿ, ಗೌರವ ಕೋಶಾಧ್ಯಕ್ಷ ದೌಲತರಾಯ ಪಾಟೀಲ, ಬಿ.ಕೆ.ಹಿರೇಮಠ, ವೀರಸಂಗಪ್ಪ ಸುಲೇಪೇಟ, ಚಂದ್ರಶೇಖರ ಕರಜಗಿ,ಮಲ್ಲಿನಾಥ ಸಂಗಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>‘ಅಪಾರ ಶ್ರಮ, ಶ್ರದ್ಧೆ ಮತ್ತು ತ್ಯಾಗದಿಂದ ಯಶಸ್ಸು ಸಾಧಿಸಿದವರ ಜೀವನ ಯುವಜನರಿಗೆ ಪ್ರೇರಣೆಯಾಗಬೇಕು’ ಎಂದು ಕಾಂಗ್ರೆಸ್ ಮುಖಂಡ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ನಗರದಲ್ಲಿ ನಡೆದ, ‘ಸಾಧಕರ ಮನದಾಳದ ಮಾತು’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದಿನ ಯುವಕರು ಪರಿಶ್ರಮದ ಹಾದಿಯನ್ನು ತುಳಿಯಲು ಹಿಂದೇಟು ಹಾಕುತ್ತಿದ್ದಾರೆ. ಅವರಿಗೆ ಸಾಧಕರು ಅನುಭವಿಸಿದ ಕಷ್ಟ, ಸಮಾಜ ಅವರಿಗೆ ನೀಡಿದ ಪ್ರೋತ್ಸಾಹದ ಕೆಲಸಗಳನ್ನು ತಿಳಿಸಿದರೆ ಅವರೂ ಕೂಡಾ ಸಾಧನೆಯ ಹಾದಿಯನ್ನು ಹಿಡಿಯುತ್ತಾರೆ. ಸಮಾಜದ ಏಳ್ಗೆಗಾಗಿ ಜೀವನವನ್ನು ಮುಡುಪಾಗಿಟ್ಟವರನ್ನು ಗುರುತಿಸುವ ಕೆಲಸವಾಗಬೇಕು’ ಎಂದರು.</p>.<p>‘ಪ್ರತಿಯೊಬ್ಬರ ಕೊಡುಗೆ ಇದ್ದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲಾ ಕ್ಷೇತ್ರಗಳಲ್ಲೂ ಸಾಧಕರು ಮೂಡಿಬರಬೇಕು. ಅವರ ಸಾಧನೆಯ ಕತೆಗಳನ್ನು ದಾಖಲೀಕರಿಸಿ, ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕಿದೆ. ಈ ಭಾಗದ ಸಾಧಕರ ಮನದಾಳದ ಮಾತುಗಳನ್ನು ಪುಸ್ತಕ ರೂಪದಲ್ಲಿ ಹೊರತಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ’ ಎಂದರು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ಮಾತನಾಡಿ, ‘ಕಲ್ಯಾಣ ಕರ್ನಾಟಕದಲ್ಲಿ ಸಾಧನೆ ಮಾಡಿದವರು ಸಾಕಷ್ಟು ಜನರು ಇದ್ದಾರೆ. ಆದರೆ ಅವರ ಸಾಧನೆಯನ್ನು ದಾಖಲೀಕರಣ ಮಾಡುವ ಪ್ರಯತ್ನಗಳು ನಡೆಯುತ್ತಿಲ್ಲ’ ಎಂದರು.</p>.<p>‘ಜಿಲ್ಲೆಯ ವಿವಿಧ ಕ್ಷೇತ್ರಗಳ 25 ಸಾಧಕರ ಯಶೋಗಾಥೆಯನ್ನು ತಿಳಿಸುವ ಪ್ರಯತ್ನ ಕೃತಿಯಲ್ಲಿದೆ. ಬಾಲ್ಯ ಜೀವನ, ಸಂಕಷ್ಟದ ದಿನಗಳ ಮೆಲುಕು, ಶಿಕ್ಷಣ, ಉದ್ಯೋಗ ಕುರಿತು ಸಾಧಕರ ಮಾತುಗಳನ್ನು ಬರಹ ರೂಪದಲ್ಲಿ ಇಳಿಸಲಾಗಿದೆ. ಮುಂಬರುವ ದಿನಗಳಲ್ಲಿ ಈ ಭಾಗದ ಮತ್ತಷ್ಟು ಸಾಧಕರನ್ನು ಪರಿಚಯಿಸುವ ಕೆಲಸ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಹಾರಕೂಡ ಚನ್ನಬಸೇಶ್ವರ ಸಂಸ್ಥಾನ ಹಿರೇಮಠದ ಚನ್ನವೀರ ಶಿವಾಚಾರ್ಯರು ಕೃತಿ ಬಿಡುಗಡೆ ಮಾಡಿದರು. ಸಾಹಿತಿ ಪ್ರೊ.ಕಲ್ಯಾಣರಾವ ಪಾಟೀಲ ಅವರು ಕೃತಿ ಪರಿಚಯಿಸಿದರು.</p>.<p>ನಂತರ ಸಾಧಕರು ಮತ್ತು ಅವರ ಕುಟುಂಬದ ಸದಸ್ಯರನ್ನು ಸನ್ಮಾನಿಸಲಾಯಿತು.</p>.<p>ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿಗಳಾದ ವಿಜಯಕುಮಾರ ಪರುತೆ, ಮಡಿವಾಳಪ್ಪ ನಾಗರಹಳ್ಳಿ, ಗೌರವ ಕೋಶಾಧ್ಯಕ್ಷ ದೌಲತರಾಯ ಪಾಟೀಲ, ಬಿ.ಕೆ.ಹಿರೇಮಠ, ವೀರಸಂಗಪ್ಪ ಸುಲೇಪೇಟ, ಚಂದ್ರಶೇಖರ ಕರಜಗಿ,ಮಲ್ಲಿನಾಥ ಸಂಗಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>