ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಕ್ಷದ ವಾಡಿ ಸಮಿತಿ ಕಾರ್ಯದರ್ಶಿ ಆರ್.ಕೆ.ವೀರಭದ್ರಪ್ಪ ಮಾತನಾಡಿ, ‘ಬಂಡವಾಳಶಾಹಿ ವರ್ಗವು ಇಂದು ಜನರ ಬಂಡವಾಳಶಾಹಿ ವಿರೋಧಿ ಹೋರಾಟಗಳನ್ನು ಹತ್ತಿಕ್ಕಲು ಸರ್ವ ಪ್ರಯತ್ನ ನಡೆಸುತ್ತಿದೆ. ಜಾತಿ, ಮತ, ಧರ್ಮಗಳ ಆಧಾರದ ಮೇಲೆ ಜನರ ಒಗ್ಗಟ್ಟನ್ನು ಮುರಿಯುತ್ತಿದೆ. ಬಂಡವಾಳಶಾಹಿಗಳ ಹಾಗೂ ಅವರ ಕೈಗೊಂಬೆ ರಾಜಕಾರಣಿಗಳ ಈ ಹುನ್ನಾರವನ್ನು ಮುರಿಯಬೇಕಿದೆ’ ಎಂದು ಹೇಳಿದರು.