ಕಲಬುರ್ಗಿ ಎಪಿಎಂಸಿ ಕಾರ್ಯದರ್ಶಿ, ಮಹಿಳಾ ಸಮಿತಿಯ ಕಾರ್ಯಧ್ಯಕ್ಷರಾದ ಶೈಲಜಾ ಅವರ ಅಧ್ಯಕ್ಷತೆಯಲ್ಲಿ ರಸಪ್ರಶ್ನೆ ನಡೆಯಿತು.ತೀರ್ಪುಗಾರರಾಗಿ ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಜಕುಮಾರ ಕೌಡಾಳ ಕಾರ್ಯನಿರ್ವಹಿಸಿದರು.ಮಹಿಳಾ ಸಮಿತಿ ಕಾರ್ಯಾಧ್ಯಕ್ಷೆ ಓಂಕಾರೇಶ್ವರಿ, ಕೃಷಿ ಮಾರಾಟ ಮಂಡಳಿಯ ಪ್ರಧಾನ ವ್ಯವಸ್ಥಾಪಕ ಚಂದ್ರಕಾಂತ ಪಾಟೀಲ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ರೇಣುಕಾದೇವಿ, ಸಣ್ಣ ಮತ್ತು ಮಧ್ಯಮ ನೀರಾವರಿ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ಪಾರ್ವತಿ ರೆಡ್ಡಿ, ಸಿಡಿಪಿಒ ತಿಪ್ಪಣ್ಣ ಸಿರಸಗಿ, ಡಾ.ವಿಜಯಲಕ್ಷ್ಮಿ ಕೋಸಗಿ, ರೇಣುಕಾ ಡಾಂಗೆ, ಅರುಣಾ ಹಳ್ಳಿಖೇಡ, ಕವಿತಾ ಪಾಟೀಲ, ಡಾ.ವಿಜಯಲಕ್ಷ್ಮೀ ಕೋಸಗಿ ಇದ್ದರು.