ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹುಲ್ಲೂರು ಗ್ರಾಮದ ಬಳಿ ಭೀಮಾ ನದಿಯಿಂದ ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅಡ್ಡಗಟ್ಟಲು ಮುಂದಾದ ನೆಲೋಗಿ ಠಾಣೆ ಕಾನ್ಸ್ಟೆಬಲ್ ಮಯೂರ ಚವ್ಹಾಣ (51) ಮೇಲೆ ಟ್ರ್ಯಾಕ್ಟರ್ ಹಾಯ್ದು ಅವರು ಮೃತಪಟ್ಟಿದ್ದಾರೆ.
ಗುರುವಾರ ರಾತ್ರಿ ಘಟನೆ ನಡೆದಿದ್ದು, ಎಸ್ಪಿ ಇಶಾ ಪಂತ್ ಅವರು ಆರೋಪಿಗಳ ಪತ್ತೆಗೆ ತನಿಖಾ ತಂಡ ರಚಿಸಿದ್ದರು.
ಮರಳು ಅಕ್ರಮ ಸಾಗಾಟ ಮಾಡುತ್ತಿದ್ದುದನ್ನು ತಡೆಯಲು ಹೋದ ಕಾನ್ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹಾಯಿಸಿ ಕೊಲೆ ಮಾಡಿದ್ದ ಆರೋಪದ ಮೇಲೆ ಟ್ರ್ಯಾಕ್ಟರ್ ಚಾಲಕ ನಾರಾಯಣಪುರದ ಸಿದ್ದಪ್ಪ ಕರ್ಜಗಿ ಎಂಬಾತನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.