ಕಲಬುರಗಿ: ‘ಅನಧಿಕೃತ ಮರಳು ಗಣಿಗಾರಿಕೆ, ದಾಸ್ತಾನು, ಸಾಗಾಟ ತಡೆಯಲು ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ, ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ತಾಲ್ಲೂಕು ಮರಳು ಸಮಿತಿ ರಚಿಸಲಾಗಿದೆ. ಇವುಗಳಲ್ಲಿ ಕಂದಾಯ, ಪೊಲೀಸ್, ಅರಣ್ಯ, ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ, ಗಣಿ ಮತ್ತು ಭೂ ವಿಜ್ಞಾನ, ಆರ್ಟಿಇ ಇಲಾಖೆ ಅಧಿಕಾರಿಗಳು ಸದಸ್ಯರಾಗಿರುತ್ತಾರೆ’ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.