<p><strong>ಕಲಬುರಗಿ:</strong> ‘ಸಂತ ಸೇವಾಲಾಲ ಮಹಾರಾಜರ 287ನೇ ಜಯಂತಿ ಅಂಗವಾಗಿ ಫೆ.15ರಂದು ಬೆಳಿಗ್ಗೆ 11 ಗಂಟೆಗೆ ನಗರೇಶ್ವರ ಶಾಲೆಯಿಂದ ಎಸ್.ಎಂ. ಪಂಡಿತ ರಂಗಮಂದಿರದವರೆಗೆ ಸೇವಾಲಾಲರ ಭಾವಚಿತ್ರದ ಭವ್ಯ ಮೆರವಣಿಗೆ ನcಡೆಸಲಾಗುವುದು’ ಎಂದು ಜಯಂತಿ ಸಮಿತಿ ಅಧ್ಯಕ್ಷ ಸಾಗರ್ ರಾಠೋಡ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಧ್ಯಾಹ್ನ 3 ಗಂಟೆಗೆ ಜಿಲ್ಲಾಡಳಿತದಿಂದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದೆ. ಸಮಾಜದ ಗುರುಗಳಾದ ಬಾಬುಸಿಂಗ್ ಮಹಾರಾಜ, ಬಳಿರಾಮ ಮಹಾರಾಜ, ಮುರಾಹರಿ ಮಹಾರಾಜ, ಜೇಮಸಿಂಗ್ ಮಹಾರಾಜ, ಪರಶುರಾಮ ಮಹಾರಾಜ ಸೇರಿದಂತೆ ಸಚಿವರು, ಶಾಸಕರು, ಜನಪ್ರತಿನಿಧಿಗಳು ಪಾಲ್ಗೊಳ್ಳುವರು. ಗಣಪತಿ ರಾಠೋಡ ಉಪನ್ಯಾಸ ನೀಡುವರು’ ಎಂದರು.</p>.<p><strong>ಮುಂದೂಡಿಕೆ:</strong> ಜಯಂತಿ ಪ್ರಯುಕ್ತ ಭಾನುವಾರ ಸಂಜೆ ನಗರದ ಬಂಜಾರ ಭವನದಲ್ಲಿ ಹಮ್ಮಿಕೊಂಡಿದ್ದ ಬಂಜಾರ ಸಾಂಸ್ಕೃತಿಕ ಉತ್ಸವವನ್ನು ಫೆ.16ರಂದು ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಬಾಲಿವುಡ್ ಗಾಯಕ ಸಂಜು ರಾಠೋಡ್ ಸೇರಿದಂತೆ ಸಿನಿಮಾ ಕಲಾವಿದರು, ಗಾಯಕರು ಪಾಲ್ಗೊಳ್ಳುವರು’ ಎಂದು ತಿಳಿಸಿದರು.</p>.<p>ಬಿಜೆಪಿ ಮುಖಂಡ ಮಣಿಕಂಠ ರಾಠೋಡ, ಪಾಲಿಕೆ ಸದಸ್ಯ ಕೃಷ್ಣಾ ನಾಯಕ, ಮಹೇಶ ನಾಯಕ, ಪ್ರವೀಣ ಜಾಧವ, ವಿಜಯ ಚವ್ಹಾಣ, ಪ್ರಭಾಕರ ರಾಠೋಡ, ಶ್ರೀಧರ ಚವ್ಹಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಸಂತ ಸೇವಾಲಾಲ ಮಹಾರಾಜರ 287ನೇ ಜಯಂತಿ ಅಂಗವಾಗಿ ಫೆ.15ರಂದು ಬೆಳಿಗ್ಗೆ 11 ಗಂಟೆಗೆ ನಗರೇಶ್ವರ ಶಾಲೆಯಿಂದ ಎಸ್.ಎಂ. ಪಂಡಿತ ರಂಗಮಂದಿರದವರೆಗೆ ಸೇವಾಲಾಲರ ಭಾವಚಿತ್ರದ ಭವ್ಯ ಮೆರವಣಿಗೆ ನcಡೆಸಲಾಗುವುದು’ ಎಂದು ಜಯಂತಿ ಸಮಿತಿ ಅಧ್ಯಕ್ಷ ಸಾಗರ್ ರಾಠೋಡ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಧ್ಯಾಹ್ನ 3 ಗಂಟೆಗೆ ಜಿಲ್ಲಾಡಳಿತದಿಂದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದೆ. ಸಮಾಜದ ಗುರುಗಳಾದ ಬಾಬುಸಿಂಗ್ ಮಹಾರಾಜ, ಬಳಿರಾಮ ಮಹಾರಾಜ, ಮುರಾಹರಿ ಮಹಾರಾಜ, ಜೇಮಸಿಂಗ್ ಮಹಾರಾಜ, ಪರಶುರಾಮ ಮಹಾರಾಜ ಸೇರಿದಂತೆ ಸಚಿವರು, ಶಾಸಕರು, ಜನಪ್ರತಿನಿಧಿಗಳು ಪಾಲ್ಗೊಳ್ಳುವರು. ಗಣಪತಿ ರಾಠೋಡ ಉಪನ್ಯಾಸ ನೀಡುವರು’ ಎಂದರು.</p>.<p><strong>ಮುಂದೂಡಿಕೆ:</strong> ಜಯಂತಿ ಪ್ರಯುಕ್ತ ಭಾನುವಾರ ಸಂಜೆ ನಗರದ ಬಂಜಾರ ಭವನದಲ್ಲಿ ಹಮ್ಮಿಕೊಂಡಿದ್ದ ಬಂಜಾರ ಸಾಂಸ್ಕೃತಿಕ ಉತ್ಸವವನ್ನು ಫೆ.16ರಂದು ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಬಾಲಿವುಡ್ ಗಾಯಕ ಸಂಜು ರಾಠೋಡ್ ಸೇರಿದಂತೆ ಸಿನಿಮಾ ಕಲಾವಿದರು, ಗಾಯಕರು ಪಾಲ್ಗೊಳ್ಳುವರು’ ಎಂದು ತಿಳಿಸಿದರು.</p>.<p>ಬಿಜೆಪಿ ಮುಖಂಡ ಮಣಿಕಂಠ ರಾಠೋಡ, ಪಾಲಿಕೆ ಸದಸ್ಯ ಕೃಷ್ಣಾ ನಾಯಕ, ಮಹೇಶ ನಾಯಕ, ಪ್ರವೀಣ ಜಾಧವ, ವಿಜಯ ಚವ್ಹಾಣ, ಪ್ರಭಾಕರ ರಾಠೋಡ, ಶ್ರೀಧರ ಚವ್ಹಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>