<p><strong>ಕಲಬುರಗಿ:</strong> ಮೊಬೈಲ್ ಫೋನ್ನಲ್ಲಿ ಆನ್ಲೈನ್ ಮೂಲಕ ₹10 ಸಾವಿರ ಲಂಚ ಪಡೆದ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್ ಕಚೇರಿಯ ಭೂಮಿ ಶಾಖೆಯ ಎಫ್ಡಿಎ ಸತೀಶ ರಾಠೋಡ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.</p><p>ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದ ನಿವಾಸಿ ಶಿವಕುಮಾರ ಹೆಗಡೆ ಎಂಬುವವರು ನೀಡಿದ ದೂರಿನನ್ವಯ ಕಲಬುರಗಿ ಲೋಕಾಯುಕ್ತ ಎಸ್ಪಿ ಸಿ. ಸಿದ್ದರಾಜು ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಅರುಣ ಮುರಗುಂಡಿ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.</p><p>ಶಿವಕುಮಾರ ಅವರ ಮಾವ ಪಾಂಡುರಂಗ ಅವರಿಗೆ ಸೇರಿದ ಹಂಚಿನಾಳ ಗ್ರಾಮದ ಸರ್ವೇ ನಂಬರ್ 13/4/3 ಜಮೀನಿನ ಪಹಣಿಯಲ್ಲಿ ‘ಸರ್ಕಾರಿ ಜಾಗ’ ಎಂದು ಬರುತ್ತಿತ್ತು. ಇದನ್ನು ಸರಿಪಡಿಸಲು ಜೇವರ್ಗಿ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ‘ಆ ಸಂಬಂಧಿತ ಕಡತವನ್ನು ತಹಶೀಲ್ದಾರ್ ಅವರ ಸಹಿ ಮಾಡಿಸಿ, ಫೈಲ್ ಅನ್ನು ಉಪವಿಭಾಗಾಧಿಕಾರಿ ಕಚೇರಿಗೆ ಕಳುಹಿಸಲು ಸತೀಶ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆ ಲಂಚದ ಹಣವನ್ನು ಫೋನ್ ಪೇ ಮೂಲಕ ಪಡೆದಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸತೀಶ ವಶಕ್ಕೆ ಪಡೆಯಲು ಲೋಕಾಯುಕ್ತ ಪೊಲೀಸರ ಎರಡು ತಂಡಗಳು ಶುಕ್ರವಾರ ದಿನವಿಡೀ ಕಾದಿದ್ದರು. ಆದರೆ, ಸತೀಶ ರಾಠೋಡ ಯಂಕಂಚಿ, ವಿಜಯಪುರ, ಸಿಂದಗಿಯಲ್ಲಿ ಓಡಾಡಿ ಅಂತಿಮವಾಗಿ ಜೇರ್ವಗಿಗೆ ಬಂದಾಗ ವಶಕ್ಕೆ ಪಡೆಯಲಾಯಿತು ಎಂದು ಮೂಲಗಳು ಹೇಳಿವೆ.</p><p>ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿಯಾದ ಮಾಜೀದ್, ಅಸ್ಲಾಂ ಕೊಡಚಿ, ಪ್ರಮೋದ್, ರಾಣೋಜಿ, ಸುನೀಲ, ಬಸವರಾಜ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಮೊಬೈಲ್ ಫೋನ್ನಲ್ಲಿ ಆನ್ಲೈನ್ ಮೂಲಕ ₹10 ಸಾವಿರ ಲಂಚ ಪಡೆದ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್ ಕಚೇರಿಯ ಭೂಮಿ ಶಾಖೆಯ ಎಫ್ಡಿಎ ಸತೀಶ ರಾಠೋಡ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.</p><p>ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದ ನಿವಾಸಿ ಶಿವಕುಮಾರ ಹೆಗಡೆ ಎಂಬುವವರು ನೀಡಿದ ದೂರಿನನ್ವಯ ಕಲಬುರಗಿ ಲೋಕಾಯುಕ್ತ ಎಸ್ಪಿ ಸಿ. ಸಿದ್ದರಾಜು ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಅರುಣ ಮುರಗುಂಡಿ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.</p><p>ಶಿವಕುಮಾರ ಅವರ ಮಾವ ಪಾಂಡುರಂಗ ಅವರಿಗೆ ಸೇರಿದ ಹಂಚಿನಾಳ ಗ್ರಾಮದ ಸರ್ವೇ ನಂಬರ್ 13/4/3 ಜಮೀನಿನ ಪಹಣಿಯಲ್ಲಿ ‘ಸರ್ಕಾರಿ ಜಾಗ’ ಎಂದು ಬರುತ್ತಿತ್ತು. ಇದನ್ನು ಸರಿಪಡಿಸಲು ಜೇವರ್ಗಿ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ‘ಆ ಸಂಬಂಧಿತ ಕಡತವನ್ನು ತಹಶೀಲ್ದಾರ್ ಅವರ ಸಹಿ ಮಾಡಿಸಿ, ಫೈಲ್ ಅನ್ನು ಉಪವಿಭಾಗಾಧಿಕಾರಿ ಕಚೇರಿಗೆ ಕಳುಹಿಸಲು ಸತೀಶ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆ ಲಂಚದ ಹಣವನ್ನು ಫೋನ್ ಪೇ ಮೂಲಕ ಪಡೆದಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸತೀಶ ವಶಕ್ಕೆ ಪಡೆಯಲು ಲೋಕಾಯುಕ್ತ ಪೊಲೀಸರ ಎರಡು ತಂಡಗಳು ಶುಕ್ರವಾರ ದಿನವಿಡೀ ಕಾದಿದ್ದರು. ಆದರೆ, ಸತೀಶ ರಾಠೋಡ ಯಂಕಂಚಿ, ವಿಜಯಪುರ, ಸಿಂದಗಿಯಲ್ಲಿ ಓಡಾಡಿ ಅಂತಿಮವಾಗಿ ಜೇರ್ವಗಿಗೆ ಬಂದಾಗ ವಶಕ್ಕೆ ಪಡೆಯಲಾಯಿತು ಎಂದು ಮೂಲಗಳು ಹೇಳಿವೆ.</p><p>ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿಯಾದ ಮಾಜೀದ್, ಅಸ್ಲಾಂ ಕೊಡಚಿ, ಪ್ರಮೋದ್, ರಾಣೋಜಿ, ಸುನೀಲ, ಬಸವರಾಜ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>