<p><strong>ಕಲಬುರ್ಗಿ:</strong> ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರು ತೂರಿ ಬಂದ ಕಲ್ಲುಗಳಿಂದಲೇ ಅಕ್ಷರದ ಇತಿಹಾಸ ಸೃಷ್ಟಿಸಿದರು. ಇನ್ನೋರ್ವ ಮಹಾನ್ ಶಿಕ್ಷಣ ಪ್ರೇಮಿ ಫಾತಿಮಾ ಶೇಖ್ ಅವರು ಆ ಅಕ್ಷರದ ಬೆಳಕನ್ನು ಮುಂದಕ್ಕೆ ಒಯ್ದರು ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ. ನೀಲಾ ಅಭಿಪ್ರಾಯಪಟ್ಟರು.</p>.<p>ನಗರದ ಬಸವೇಶ್ವರ ಕಾಲೊನಿಯಲ್ಲಿ ಭಾನುವಾರ ಸಾವಿತ್ರಿಬಾಯಿ ಫುಲೆ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜ್ಯೋತಿಬಾ ಹಾಗೂ ಸಾವಿತ್ರಿಬಾಯಿ ಫುಲೆ ದಂಪತಿ ತಳಸಮುದಾಯಗಳ ಏಳಿಗೆಗಾಗಿ ಹಾಗೂ ಮಹಿಳೆಯರ ಸಮಾನತೆಗಾಗಿ, ಶಿಕ್ಷಣಕ್ಕಾಗಿ<br />ಹೋರಾಡಿದ ದಿಟ್ಟತನದ ಬಗ್ಗೆ ಹಾಗೂ ಸಾಮಾಜಿಕ ಕಳಕಳಿಯ ಬಗ್ಗೆ ತಿಳಿಸಿದರು.</p>.<p>‘ಬಂದ ಕಷ್ಟಗಳನ್ನೆಲ್ಲ ಧೈರ್ಯದಿಂದ ಎದುರಿಸಿ ಶಿಕ್ಷಣಕ್ಕೆ ಮಹತ್ವ ನೀಡಿದ ಅಕ್ಷರದ ಕ್ರಾಂತಿ ಸಾವಿತ್ರಿಬಾಯಿ ಪುಲೆ ಅವರ ಬದುಕು ಪ್ರತಿಯೊಬ್ಬ ಮಹಿಳೆಯೂ ತಿಳಿದುಕೊಳ್ಳಬೇಕು’ ಎಂದರು.</p>.<p>ಕಾರ್ಯಕ್ರಮ ಆಯೋಜಿಸಿದ್ದ ಶಹನಾಝ್ ಅಕ್ತರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಲವಿತ್ರ ವಸ್ತ್ರದ್ ಹಾಡನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಿಯಾಂಕಾ ಮಾವಿನಕರ್ ಸ್ವಾಗತಿಸಿದರು. ಸಾವಿತ್ರಿ ಬೀದರ, ಸ್ನೇಹಾ ಬೀದರ ಹಾಗೂ ಮಹಿಳಾ ಸಂಘಟನೆಯ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರು ತೂರಿ ಬಂದ ಕಲ್ಲುಗಳಿಂದಲೇ ಅಕ್ಷರದ ಇತಿಹಾಸ ಸೃಷ್ಟಿಸಿದರು. ಇನ್ನೋರ್ವ ಮಹಾನ್ ಶಿಕ್ಷಣ ಪ್ರೇಮಿ ಫಾತಿಮಾ ಶೇಖ್ ಅವರು ಆ ಅಕ್ಷರದ ಬೆಳಕನ್ನು ಮುಂದಕ್ಕೆ ಒಯ್ದರು ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ. ನೀಲಾ ಅಭಿಪ್ರಾಯಪಟ್ಟರು.</p>.<p>ನಗರದ ಬಸವೇಶ್ವರ ಕಾಲೊನಿಯಲ್ಲಿ ಭಾನುವಾರ ಸಾವಿತ್ರಿಬಾಯಿ ಫುಲೆ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜ್ಯೋತಿಬಾ ಹಾಗೂ ಸಾವಿತ್ರಿಬಾಯಿ ಫುಲೆ ದಂಪತಿ ತಳಸಮುದಾಯಗಳ ಏಳಿಗೆಗಾಗಿ ಹಾಗೂ ಮಹಿಳೆಯರ ಸಮಾನತೆಗಾಗಿ, ಶಿಕ್ಷಣಕ್ಕಾಗಿ<br />ಹೋರಾಡಿದ ದಿಟ್ಟತನದ ಬಗ್ಗೆ ಹಾಗೂ ಸಾಮಾಜಿಕ ಕಳಕಳಿಯ ಬಗ್ಗೆ ತಿಳಿಸಿದರು.</p>.<p>‘ಬಂದ ಕಷ್ಟಗಳನ್ನೆಲ್ಲ ಧೈರ್ಯದಿಂದ ಎದುರಿಸಿ ಶಿಕ್ಷಣಕ್ಕೆ ಮಹತ್ವ ನೀಡಿದ ಅಕ್ಷರದ ಕ್ರಾಂತಿ ಸಾವಿತ್ರಿಬಾಯಿ ಪುಲೆ ಅವರ ಬದುಕು ಪ್ರತಿಯೊಬ್ಬ ಮಹಿಳೆಯೂ ತಿಳಿದುಕೊಳ್ಳಬೇಕು’ ಎಂದರು.</p>.<p>ಕಾರ್ಯಕ್ರಮ ಆಯೋಜಿಸಿದ್ದ ಶಹನಾಝ್ ಅಕ್ತರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಲವಿತ್ರ ವಸ್ತ್ರದ್ ಹಾಡನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಿಯಾಂಕಾ ಮಾವಿನಕರ್ ಸ್ವಾಗತಿಸಿದರು. ಸಾವಿತ್ರಿ ಬೀದರ, ಸ್ನೇಹಾ ಬೀದರ ಹಾಗೂ ಮಹಿಳಾ ಸಂಘಟನೆಯ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>