ಮಂಗಳವಾರ, ಮಾರ್ಚ್ 21, 2023
20 °C

ಬಿಟ್ಟಿ ಚಾಕರಿ; ಪರಿಹಾರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ‘ಜೀತ ಹಾಗೂ ಬಿಟ್ಟಿ ಚಾಕರಿಯಿಂದ ನರಳುತ್ತಿರುವ ಪರಿಶಿಷ್ಟರ ರಕ್ಷಣೆಗಾಗಿ ಜೀವಿಕ ಸಂಘಟನೆ ನಿರಂತರ ಕೆಲಸ ಮಾಡುತ್ತಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯ ವಿವಿಧೆಡೆ ಸಂಚರಿಸಿ, ಬಿಟ್ಟಿ ಚಾಕರಿಯಲ್ಲಿ ಸಿಲುಕಿಕೊಂಡಿದ್ದ ಹಲವರನ್ನು ಪತ್ತೆ ಮಾಡಲಾಗಿದೆ’ ಎಂದು ಜೀವಿಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಡಾ.ಕಿರಣ ಪ್ರಸಾದ್‌ ಹೇಳಿದರು.

ಬಿಟ್ಟಿ ಚಾಕರಿ ಕುರಿತಂತೆ ನಗರದಲ್ಲಿ ಭಾನುವಾರ ನಡೆದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜೀತ ಪದ್ಧತಿಯ ಫಲಾನುಭವಿಗಳಿಗೆ ಸಿಗುವ ಎಲ್ಲ ಸೌಕರ್ಯಗಳೂ ಬಿಟ್ಟಿ ಚಾಕರಿ ಮಾಡುವವರಿಗೂ ಸಿಗಬೇಕಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ಮನವಿ ಕೂಡ ಸಲ್ಲಿಸಲಾಗಿದೆ’ ಎಂದರು.

ಡಿಎಂಎಸ್‍ಎಸ್ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ್ ತಾರಫೈಲ್‌ ಮಾತನಾಡಿ, ‘ಮನುಷ್ಯ ತನ್ನ ಕೆಲಸದಿಂದ ಶ್ರೇಷ್ಠ ಆಗುತ್ತಾನೆ ಹೊರತು; ಹುಟ್ಟಿನಿಂದ ಅಲ್ಲ. ಆರೋಗ್ಯಕರ ಸಮಾಜವನ್ನು ಕಟ್ಟಬೇಕಾದರೆ ಇಂಥ ಪದ್ಧತಿಗಳಿಂದ ಹೊರಬರಬೇಕ’ ಎಂದರು.

ಡಿಎಂಎಸ್‍ಎಸ್‌ ಸಂಘಟನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜ್ ಜವಳಿ, ಜೀವಿಕ ಜಿಲ್ಲಾ ಉಸ್ತುವಾರಿ ಸಂಚಾಲಕ ಡಾ.ನಾರಾಯಣಸ್ವಾಮಿ, ಮುಖಂಡರಾದ ರವಿಕುಮಾರ್ ಕಲಬುರಗಿ, ಅಮರಾವತಿ, ನರಸಿಂಹಮೂರ್ತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು