<p><strong>ವಾಡಿ:</strong> ಪಟ್ಟಣ ಸಮೀಪದ ನಾಲವಾರ ಸ್ಟೇಷನ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೋಣೆಗಳು ಶಿಥಿಲಾವಸ್ಥೆ ಹಂತಕ್ಕೆ ತಲುಪಿದ್ದು, ಇಲ್ಲಿನ ಮಕ್ಕಳು ಜೀವಭಯದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.</p>.<p>ಓಬೀರಾಯನ ಕಾಲದ ಹಲವು ಕೋಣೆಗಳು ಮಳೆ ಬಂದಾಗ ಸೋರುತ್ತವೆ. ಕಟ್ಟಡಗಳ ಮೇಲ್ಛಾವಣಿಗಳು ಉದುರಿ ಬೀಳುತ್ತಿದ್ದು, ಮಕ್ಕಳ ಪಾಲಿಗೆ ಜೀವಕಂಟಕವಾಗಿ ಪರಿಣಮಿಸುತ್ತಿವೆ.</p>.<p>ತುಕ್ಕು ಹಿಡಿದ ಚಾವಣಿಯ ಕಬ್ಬಿಣದ ಸರಳುಗಳು ಹೊರಗೆ ಕಾಣಿಸುತ್ತಿವೆ. ಸತ್ವ ಕಳೆದುಕೊಂಡ ಸಿಮೆಂಟ್ ಅವಶೇಷಗಳು ಕಳಚಿ ಬೀಳುತ್ತಿವೆ.</p>.<p>ಕಟ್ಟಡಗಳ ದುರಸ್ತಿ, ನವೀಕರಣ ಹಾಗೂ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿ, ಸರ್ವ ಶಿಕ್ಷಣ ಅಭಿಯಾನ, ರಾಷ್ಟ್ರೀಯ ಮಾಧ್ಯಮಿಕ ಯೋಜನೆ, ಜಿಲ್ಲಾ ಪಂಚಾಯಿತಿ, ತಾ.ಪಂ ನ ವಿವಿಧ ಯೋಜನೆಯಡಿ ಅನುದಾನ ಮಂಜೂರಿಗೆ ಅವಕಾಶವಿದೆ. ಆದರೆ ಈ ಶಾಲೆಗೆ ಮಾತ್ರ ದುರಸ್ತಿ ಭಾಗ್ಯ ದೊರಕಿಲ್ಲ. 1 ರಿಂದ 8ನೇ ತರಗತಿವರೆಗೆ ನಡೆಯುತ್ತಿರುವ ಇಲ್ಲಿ ಒಟ್ಟು 180 ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಆದರೆ ಕೋಣೆಗಳ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಈ ಸಮಸ್ಯೆ ಪರಿಹರಿಸಿ ಮಕ್ಕಳ ಅಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು ಎಂಬುದು ಗ್ರಾಮಸ್ಥರ<br />ಒತ್ತಾಯವಾಗಿದೆ.</p>.<p>ಶಾಲೆಯಲ್ಲಿ ಒಟ್ಟು 5 ಕೋಣೆಗಳಿವೆ. ಅದರಲ್ಲಿ 4 ಕೋಣೆಗಳು ಶಿಥಿಲಾವಸ್ಥೆ ಹಂತಕ್ಕೆ ತಲುಪಿವೆ. ಕೋಣೆಗಳ ಕೊರತೆಯಿಂದ ಹಲವು ತರಗತಿಗಳನ್ನು ಒಂದೇ ಕೋಣೆಯಲ್ಲಿ ನಡೆಸಲಾಗುತ್ತಿದೆ. ಬಿಸಿಯೂಟ ತಯಾರಿಕೆ ಕೋಣೆ ಸಹ ಸೋರುತ್ತಿದ್ದು, ಹಲವು ಬಾರಿ ಬಿಸಿಯೂಟಕ್ಕಾಗಿ ಸಂಗ್ರಹಿಸಿಟ್ಟಿದ್ದ ದವಸ ಧಾನ್ಯಗಳು ಹಾಳಾಗಿ ಹೋಗಿವೆ ಎನ್ನುತ್ತಾರೆ ಪೋಷಕರು.</p>.<p>ಈಗಾಗಲೇ ಹಲವು ಬಾರಿ ಮೇಲ್ಛಾವಣಿಯ ಸಿಮೆಂಟ್ ಕಳಚಿ ಬಿದ್ದಿದೆ. ಸದಾ ಆತಂಕದಲ್ಲಿ ಪಾಠ ಆಲಿಸಬೇಕಾದ ಸ್ಥಿತಿ ಉಂಟಾಗಿದೆ. ಕೂಡಲೇ ದುರಸ್ತಿ ಕಾರ್ಯ ಮಾಡಬೇಕು, ಇಲ್ಲವೇ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಮುಂದಾಗಬೇಕು ಎನ್ನುತ್ತಾರೆ ಸ್ಥಳೀಯರಾದ ಜಾವೀದ್ ಮುಲ್ಲಾ.</p>.<p><strong>ಮುರಿದ ಬೆಂಚುಗಳು</strong></p>.<p>ಶಾಲೆಗೆ ಪೂರೈಸಿದ ಅಲ್ಪಸ್ವಲ್ಪ ಬೆಂಚುಗಳು ಮುರಿದು ಹೋಗಿವೆ. ಮುರಿದ ಬೆಂಚುಗಳನ್ನು ಅನಿವಾರ್ಯವಾಗಿ ಬಳಸಿಕೊಂಡು ಕೆಲವು ಮಕ್ಕಳು ಕುಳಿತರೆ ಇನ್ನು ಕೆಲವರು ನೆಲದ ಮೇಲೆ ಕುಳಿತು ಪಾಠ ಕೇಳುತ್ತಾರೆ.</p>.<p>ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಬೇಕು ಎನ್ನುತ್ತಾರೆ ಸ್ಥಳೀಯರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ:</strong> ಪಟ್ಟಣ ಸಮೀಪದ ನಾಲವಾರ ಸ್ಟೇಷನ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೋಣೆಗಳು ಶಿಥಿಲಾವಸ್ಥೆ ಹಂತಕ್ಕೆ ತಲುಪಿದ್ದು, ಇಲ್ಲಿನ ಮಕ್ಕಳು ಜೀವಭಯದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.</p>.<p>ಓಬೀರಾಯನ ಕಾಲದ ಹಲವು ಕೋಣೆಗಳು ಮಳೆ ಬಂದಾಗ ಸೋರುತ್ತವೆ. ಕಟ್ಟಡಗಳ ಮೇಲ್ಛಾವಣಿಗಳು ಉದುರಿ ಬೀಳುತ್ತಿದ್ದು, ಮಕ್ಕಳ ಪಾಲಿಗೆ ಜೀವಕಂಟಕವಾಗಿ ಪರಿಣಮಿಸುತ್ತಿವೆ.</p>.<p>ತುಕ್ಕು ಹಿಡಿದ ಚಾವಣಿಯ ಕಬ್ಬಿಣದ ಸರಳುಗಳು ಹೊರಗೆ ಕಾಣಿಸುತ್ತಿವೆ. ಸತ್ವ ಕಳೆದುಕೊಂಡ ಸಿಮೆಂಟ್ ಅವಶೇಷಗಳು ಕಳಚಿ ಬೀಳುತ್ತಿವೆ.</p>.<p>ಕಟ್ಟಡಗಳ ದುರಸ್ತಿ, ನವೀಕರಣ ಹಾಗೂ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿ, ಸರ್ವ ಶಿಕ್ಷಣ ಅಭಿಯಾನ, ರಾಷ್ಟ್ರೀಯ ಮಾಧ್ಯಮಿಕ ಯೋಜನೆ, ಜಿಲ್ಲಾ ಪಂಚಾಯಿತಿ, ತಾ.ಪಂ ನ ವಿವಿಧ ಯೋಜನೆಯಡಿ ಅನುದಾನ ಮಂಜೂರಿಗೆ ಅವಕಾಶವಿದೆ. ಆದರೆ ಈ ಶಾಲೆಗೆ ಮಾತ್ರ ದುರಸ್ತಿ ಭಾಗ್ಯ ದೊರಕಿಲ್ಲ. 1 ರಿಂದ 8ನೇ ತರಗತಿವರೆಗೆ ನಡೆಯುತ್ತಿರುವ ಇಲ್ಲಿ ಒಟ್ಟು 180 ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಆದರೆ ಕೋಣೆಗಳ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಈ ಸಮಸ್ಯೆ ಪರಿಹರಿಸಿ ಮಕ್ಕಳ ಅಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು ಎಂಬುದು ಗ್ರಾಮಸ್ಥರ<br />ಒತ್ತಾಯವಾಗಿದೆ.</p>.<p>ಶಾಲೆಯಲ್ಲಿ ಒಟ್ಟು 5 ಕೋಣೆಗಳಿವೆ. ಅದರಲ್ಲಿ 4 ಕೋಣೆಗಳು ಶಿಥಿಲಾವಸ್ಥೆ ಹಂತಕ್ಕೆ ತಲುಪಿವೆ. ಕೋಣೆಗಳ ಕೊರತೆಯಿಂದ ಹಲವು ತರಗತಿಗಳನ್ನು ಒಂದೇ ಕೋಣೆಯಲ್ಲಿ ನಡೆಸಲಾಗುತ್ತಿದೆ. ಬಿಸಿಯೂಟ ತಯಾರಿಕೆ ಕೋಣೆ ಸಹ ಸೋರುತ್ತಿದ್ದು, ಹಲವು ಬಾರಿ ಬಿಸಿಯೂಟಕ್ಕಾಗಿ ಸಂಗ್ರಹಿಸಿಟ್ಟಿದ್ದ ದವಸ ಧಾನ್ಯಗಳು ಹಾಳಾಗಿ ಹೋಗಿವೆ ಎನ್ನುತ್ತಾರೆ ಪೋಷಕರು.</p>.<p>ಈಗಾಗಲೇ ಹಲವು ಬಾರಿ ಮೇಲ್ಛಾವಣಿಯ ಸಿಮೆಂಟ್ ಕಳಚಿ ಬಿದ್ದಿದೆ. ಸದಾ ಆತಂಕದಲ್ಲಿ ಪಾಠ ಆಲಿಸಬೇಕಾದ ಸ್ಥಿತಿ ಉಂಟಾಗಿದೆ. ಕೂಡಲೇ ದುರಸ್ತಿ ಕಾರ್ಯ ಮಾಡಬೇಕು, ಇಲ್ಲವೇ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಮುಂದಾಗಬೇಕು ಎನ್ನುತ್ತಾರೆ ಸ್ಥಳೀಯರಾದ ಜಾವೀದ್ ಮುಲ್ಲಾ.</p>.<p><strong>ಮುರಿದ ಬೆಂಚುಗಳು</strong></p>.<p>ಶಾಲೆಗೆ ಪೂರೈಸಿದ ಅಲ್ಪಸ್ವಲ್ಪ ಬೆಂಚುಗಳು ಮುರಿದು ಹೋಗಿವೆ. ಮುರಿದ ಬೆಂಚುಗಳನ್ನು ಅನಿವಾರ್ಯವಾಗಿ ಬಳಸಿಕೊಂಡು ಕೆಲವು ಮಕ್ಕಳು ಕುಳಿತರೆ ಇನ್ನು ಕೆಲವರು ನೆಲದ ಮೇಲೆ ಕುಳಿತು ಪಾಠ ಕೇಳುತ್ತಾರೆ.</p>.<p>ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಬೇಕು ಎನ್ನುತ್ತಾರೆ ಸ್ಥಳೀಯರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>