<p><strong>ಕಲಬುರ್ಗಿ</strong>: ’ಜಿಲ್ಲೆಯಲ್ಲಿ ನಡೆಯಲಿರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ‘ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಮೊಹ್ಸಿನ್ ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಈಚೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಹನ್ನಾನ್ ಜಿಲ್ಲೆಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣೆ ಪೂರ್ವಸಿದ್ಧತೆ ಕುರಿತು ಚರ್ಚಿಸಿದ್ದಾರೆ. ಕಲಬುರ್ಗಿಯ 3 ಜಿಲ್ಲಾ ಪಂಚಾಯಿತಿ, 30 ತಾಲ್ಲೂಕು ಪಂಚಾಯಿತಿ ಹಾಗೂ ಪಾಲಿಕೆಯ 22 ವಾರ್ಡ್ಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಅಲ್ಲದೆ ಯಾದಗಿರಿ ಜಿಲ್ಲೆಯಲ್ಲಿ 2 ಜಿಲ್ಲಾ ಪಂಚಾಯಿತಿ ಹಾಗೂ 15 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಲಿದೆ‘ ಎಂದು ಅವರು ತಿಳಿಸಿದರು.</p>.<p>’ಎಲ್ಲಾ ಪಕ್ಷಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿವೆ. 371 (ಜೆ) ಸಮರ್ಪಕವಾಗಿ ಜಾರಿಯಾಗದ ಕಾರಣ ಈ ಭಾಗದ ಜನರಿಗೆ ಉದ್ಯೋಗ ಹಾಗೂ ಸೌಲಭ್ಯ ಸಿಕ್ಕಿಲ್ಲ. ಎಸ್ಡಿಪಿಐ ಗೆಲುವು ಸಾಧಿಸಿದರೆ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದೆ‘ ಎಂದರು.</p>.<p>ಪಕ್ಷದ ಮುಖಂಡರಾದ ರಿಜ್ವಾನ್ ಅಹಮದ್, ಅಬ್ದುಲ್ ರಹೀಂ ಪಟೇಲ್, ಸಯ್ಯದ್ ದಸ್ತಗೀರ್, ಮೊಹಮ್ಮದ್ ಫಾಹೀಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ’ಜಿಲ್ಲೆಯಲ್ಲಿ ನಡೆಯಲಿರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ‘ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಮೊಹ್ಸಿನ್ ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಈಚೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಹನ್ನಾನ್ ಜಿಲ್ಲೆಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣೆ ಪೂರ್ವಸಿದ್ಧತೆ ಕುರಿತು ಚರ್ಚಿಸಿದ್ದಾರೆ. ಕಲಬುರ್ಗಿಯ 3 ಜಿಲ್ಲಾ ಪಂಚಾಯಿತಿ, 30 ತಾಲ್ಲೂಕು ಪಂಚಾಯಿತಿ ಹಾಗೂ ಪಾಲಿಕೆಯ 22 ವಾರ್ಡ್ಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಅಲ್ಲದೆ ಯಾದಗಿರಿ ಜಿಲ್ಲೆಯಲ್ಲಿ 2 ಜಿಲ್ಲಾ ಪಂಚಾಯಿತಿ ಹಾಗೂ 15 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಲಿದೆ‘ ಎಂದು ಅವರು ತಿಳಿಸಿದರು.</p>.<p>’ಎಲ್ಲಾ ಪಕ್ಷಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿವೆ. 371 (ಜೆ) ಸಮರ್ಪಕವಾಗಿ ಜಾರಿಯಾಗದ ಕಾರಣ ಈ ಭಾಗದ ಜನರಿಗೆ ಉದ್ಯೋಗ ಹಾಗೂ ಸೌಲಭ್ಯ ಸಿಕ್ಕಿಲ್ಲ. ಎಸ್ಡಿಪಿಐ ಗೆಲುವು ಸಾಧಿಸಿದರೆ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದೆ‘ ಎಂದರು.</p>.<p>ಪಕ್ಷದ ಮುಖಂಡರಾದ ರಿಜ್ವಾನ್ ಅಹಮದ್, ಅಬ್ದುಲ್ ರಹೀಂ ಪಟೇಲ್, ಸಯ್ಯದ್ ದಸ್ತಗೀರ್, ಮೊಹಮ್ಮದ್ ಫಾಹೀಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>