<p><strong>ವಾಡಿ:</strong> ಚಿಂಚೋಳಿ ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಈಚೆಗೆ ಜರುಗಿದ ಅತ್ಯಾಚಾರ ಹಾಗೂ ಕೊಲೆ ಘಟನೆಗಳನ್ನು ಖಂಡಿಸಿ ಶನಿವಾರ ಇಲ್ಲಿ ಎಸ್ಡಿಪಿಐ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಮೌಲಾನ ಅಬ್ದುಲ್ ಕಲಾಂ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಾಗಿ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡಿತು.</p>.<p>ಸಂಘಟನೆಯ ಸ್ಥಳೀಯ ಅಧ್ಯಕ್ಷ ಮಹಮದ್ ಅಸೀಫ್ ಪಗಡಿವಾಲೆ ಮಾತನಾಡಿ, 'ಅತ್ಯಾಚಾರ ಪ್ರಕರಣಗಳು ಪದೇ ಪದೇ ಜರುಗುತ್ತಿದ್ದು, ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗುತ್ತಿದೆ. ಹಾಡಹಗಲೇ ಇಂಥ ಘಟನೆಗಳು ಸಂಭವಿಸುತ್ತಿರುವುದು ಮಹಿಳೆಯರಲ್ಲಿ ಆತಂಕಕ್ಕೆ ಕಾರಣವಾಗಿದೆ’ ಎಂದರು.</p>.<p>‘ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅತ್ಯಾಚಾರ ನಡೆಸಿದವರಿಗೆ ಕೂಡಲೇ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.</p>.<p>ಹೋರಾಟಗಾರರಾದ ಜಹೂರ್ ಖಾನ್, ಶ್ರವಣಕುಮಾರ ಮೊಸಳಗಿ, ಲಾಖೇಶ ಮೋಹನ್, ಖಲೀಲ ಆಹ್ಮದ್, ಮಹ್ಮದ್ ಮೋಸಿನ್, ಅಲ್ತಾಫ್ ಆಹ್ಮದ್, ಶೇಖ್ ಸದ್ದಾಂ, ಶೇಖ್ ಮಹೆಮೂದ್, ಗೌಸ್ ಪಾಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ:</strong> ಚಿಂಚೋಳಿ ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಈಚೆಗೆ ಜರುಗಿದ ಅತ್ಯಾಚಾರ ಹಾಗೂ ಕೊಲೆ ಘಟನೆಗಳನ್ನು ಖಂಡಿಸಿ ಶನಿವಾರ ಇಲ್ಲಿ ಎಸ್ಡಿಪಿಐ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಮೌಲಾನ ಅಬ್ದುಲ್ ಕಲಾಂ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಾಗಿ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡಿತು.</p>.<p>ಸಂಘಟನೆಯ ಸ್ಥಳೀಯ ಅಧ್ಯಕ್ಷ ಮಹಮದ್ ಅಸೀಫ್ ಪಗಡಿವಾಲೆ ಮಾತನಾಡಿ, 'ಅತ್ಯಾಚಾರ ಪ್ರಕರಣಗಳು ಪದೇ ಪದೇ ಜರುಗುತ್ತಿದ್ದು, ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗುತ್ತಿದೆ. ಹಾಡಹಗಲೇ ಇಂಥ ಘಟನೆಗಳು ಸಂಭವಿಸುತ್ತಿರುವುದು ಮಹಿಳೆಯರಲ್ಲಿ ಆತಂಕಕ್ಕೆ ಕಾರಣವಾಗಿದೆ’ ಎಂದರು.</p>.<p>‘ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅತ್ಯಾಚಾರ ನಡೆಸಿದವರಿಗೆ ಕೂಡಲೇ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.</p>.<p>ಹೋರಾಟಗಾರರಾದ ಜಹೂರ್ ಖಾನ್, ಶ್ರವಣಕುಮಾರ ಮೊಸಳಗಿ, ಲಾಖೇಶ ಮೋಹನ್, ಖಲೀಲ ಆಹ್ಮದ್, ಮಹ್ಮದ್ ಮೋಸಿನ್, ಅಲ್ತಾಫ್ ಆಹ್ಮದ್, ಶೇಖ್ ಸದ್ದಾಂ, ಶೇಖ್ ಮಹೆಮೂದ್, ಗೌಸ್ ಪಾಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>