ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಭೇಟಿ ನೀಡುವವರು ಕಡ್ಡಾಯವಾಗಿ ಆರ್ಟಿ–ಪಿಸಿಆರ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಅಲ್ಲದೆ ಪರೀಕ್ಷೆ 72 ಗಂಟೆ ಒಳಗೆ ಇದ್ದರೆ ಮಾತ್ರ ವಾಹನಗಳನ್ನು ರಾಜ್ಯದ ಗಡಿ ಒಳಗೆ ಪ್ರವೇಶ ಮಾಡಲು ಅವಕಾಶ ನೀಡಲಾಗುತ್ತದೆ. ಪ್ರತಿಯೊಂದು ವಾಹನವನ್ನು ಚೆಕ್ ಪೋಸ್ಟ್ನಲ್ಲಿ ತಪಾಸಣೆ ಮಾಡಿ ಗಡಿ ಒಳಗೆ ಬಿಡಲಾಗುತ್ತದೆ. ದೇವಲ ಗಾಣಗಾಪುರ ಮತ್ತು ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ದಿನಾಲೂ ಹೆಚ್ಚಿನ ವಾಹನಗಳು ಬರುತ್ತಿರುವುದರಿಂದ ಚೆಕ್ ಪೋಸ್ಟ್ನಲ್ಲಿ ಹೆಚ್ಚಿನ ಬಂದೋಬಸ್ತ್ ಏರ್ಪಡಿಸಿದ್ದು, ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.