<p><strong>ಸೇಡಂ (ಕಲಬುರಗಿ ಜಿಲ್ಲೆ):</strong> ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಬುಧವಾರ ಬೆಳಗಿನ ಜಾವ ಭಾರಿ ಮಳೆಯಾಗಿದೆ. </p><p>ಬುಧವಾರ ಬೆಳಿಗ್ಗೆ ನಾಲ್ಕು ಗಂಟೆಗೆ ಆರಂಭಗೊಂಡ ಮಳೆಯೂ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಸುರಿದೆ. ನಿರಂತರ ಮಳೆಯ ಆರ್ಭಟ ಮುಂದುವರಿದಿದ್ದು, ಜನರ ಮನೆಯಿಂದ ಹೊರಬರಲು ಪರದಾಡುವಂತಾಗಿದೆ. ಬಿರುಸಿನ ಗಾಳಿಯಿಂದಾಗಿ ಕೆಲವು ಕಡೆಗಳಲ್ಲಿ ಗಿಡಗಳು ನೆಲಕ್ಕೆ ಉರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. </p><p>ಬೆಳಿಗ್ಗೆಯೇ ಮಳೆಯ ಸುರಿಯಲಾರಂಭಿಸಿದ್ದರಿಂದ 10 ಗಂಟೆಯಾದರೂ ಅಂಗಡಿಗಳು ತೆರಿದಿಲ್ಲ. ಅಲ್ಲದೆ ಭಾರಿ ಮಳೆಯಿಂದಾಗಿ ತಾಲ್ಲೂಕಿನ ತೊಟ್ನಳ್ಳಿ ಗ್ರಾಮದ ಜಗನ್ನಾಥ ಬಡಿಗೆರ ಅವರ ಮನೆ ನೆಲಕ್ಕುರುಳಿದೆ. ಅಲ್ಲದೆ ತೊಟ್ನಳ್ಳಿ ಗ್ರಾಮದ ಮಹಾಂತೇಶ್ವರ ಮಠ ಜಲಾವೃತ್ತಗೊಂಡಿದೆ. </p>.<p>ನಗರದ ಚರಂಡಿ ತುಂಬಿ ರಸ್ತೆ ಮೇಲೆ ನೀರು ಹರಿದಿದ್ದು, ಕೆಲವು ಮನೆಗಳಲ್ಲಿ ನೀರು ನುಗ್ಗಿದೆ. ತಾಲ್ಲೂಕಿನ ಮಳಖೇಡ, ತೊಟ್ನಳ್ಳಿ, ಕೋಲ್ಕುಂದಾ, ಮುಧೋಳ ಸೇರಿದಂತೆ ಹಲವು ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. </p><p>ಬೆಳಿಗ್ಗೆಯೇ ಮಳೆ ಬರಲಾರಂಭಿಸಿದ್ದರಿಂದ ವಾಹನ ಸವಾರರು ಹಾಗೂ ವ್ಯಾಪಾರಸ್ಥರು ಪರದಾಡುತ್ತಿದ್ದಾರೆ. ಸೇಡಂ 94 ಮಿ.ಮೀ, ಅಡಕಿ 63 ಮಿ.ಮೀ, ಮುಧೋಳ 72 ಮಿ.ಮೀ, ಕೋಡ್ಲಾ 38 ಮಿ.ಮೀ ಮತ್ತು ಕೋಲ್ಕುಂದಾ 96 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ (ಕಲಬುರಗಿ ಜಿಲ್ಲೆ):</strong> ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಬುಧವಾರ ಬೆಳಗಿನ ಜಾವ ಭಾರಿ ಮಳೆಯಾಗಿದೆ. </p><p>ಬುಧವಾರ ಬೆಳಿಗ್ಗೆ ನಾಲ್ಕು ಗಂಟೆಗೆ ಆರಂಭಗೊಂಡ ಮಳೆಯೂ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಸುರಿದೆ. ನಿರಂತರ ಮಳೆಯ ಆರ್ಭಟ ಮುಂದುವರಿದಿದ್ದು, ಜನರ ಮನೆಯಿಂದ ಹೊರಬರಲು ಪರದಾಡುವಂತಾಗಿದೆ. ಬಿರುಸಿನ ಗಾಳಿಯಿಂದಾಗಿ ಕೆಲವು ಕಡೆಗಳಲ್ಲಿ ಗಿಡಗಳು ನೆಲಕ್ಕೆ ಉರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. </p><p>ಬೆಳಿಗ್ಗೆಯೇ ಮಳೆಯ ಸುರಿಯಲಾರಂಭಿಸಿದ್ದರಿಂದ 10 ಗಂಟೆಯಾದರೂ ಅಂಗಡಿಗಳು ತೆರಿದಿಲ್ಲ. ಅಲ್ಲದೆ ಭಾರಿ ಮಳೆಯಿಂದಾಗಿ ತಾಲ್ಲೂಕಿನ ತೊಟ್ನಳ್ಳಿ ಗ್ರಾಮದ ಜಗನ್ನಾಥ ಬಡಿಗೆರ ಅವರ ಮನೆ ನೆಲಕ್ಕುರುಳಿದೆ. ಅಲ್ಲದೆ ತೊಟ್ನಳ್ಳಿ ಗ್ರಾಮದ ಮಹಾಂತೇಶ್ವರ ಮಠ ಜಲಾವೃತ್ತಗೊಂಡಿದೆ. </p>.<p>ನಗರದ ಚರಂಡಿ ತುಂಬಿ ರಸ್ತೆ ಮೇಲೆ ನೀರು ಹರಿದಿದ್ದು, ಕೆಲವು ಮನೆಗಳಲ್ಲಿ ನೀರು ನುಗ್ಗಿದೆ. ತಾಲ್ಲೂಕಿನ ಮಳಖೇಡ, ತೊಟ್ನಳ್ಳಿ, ಕೋಲ್ಕುಂದಾ, ಮುಧೋಳ ಸೇರಿದಂತೆ ಹಲವು ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. </p><p>ಬೆಳಿಗ್ಗೆಯೇ ಮಳೆ ಬರಲಾರಂಭಿಸಿದ್ದರಿಂದ ವಾಹನ ಸವಾರರು ಹಾಗೂ ವ್ಯಾಪಾರಸ್ಥರು ಪರದಾಡುತ್ತಿದ್ದಾರೆ. ಸೇಡಂ 94 ಮಿ.ಮೀ, ಅಡಕಿ 63 ಮಿ.ಮೀ, ಮುಧೋಳ 72 ಮಿ.ಮೀ, ಕೋಡ್ಲಾ 38 ಮಿ.ಮೀ ಮತ್ತು ಕೋಲ್ಕುಂದಾ 96 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>