<p><strong>ಸೇಡಂ( ಕಲಬುರಗಿ ಜಿಲ್ಲೆ):</strong> ಲಾರಿ ಮತ್ತು ಎರಡು ಬೈಕ್ ಗಳು ಮಧ್ಯೆ ಸಂಭವಿಸಿದ ಅಪಘತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಕೊಂಕನಳ್ಳಿ ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ. </p><p>ಸೇಡಂ ನಗರದ ಸಣ್ಣ ಅಗಸಿ ಬಡಾವಣೆಯ ನಿವಾಸಿಗಳು, ಸಹೋದರರಾದ ಸಂಜೀವಕುಮಾರ (21) ಹಾಗೂ ಕಾಶಿನಾಥ (19) ಮತ್ತು ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮದ ಮಹೇಶ ದೊಡ್ಡಪ್ಪ ಹಳ್ಳಿ(26) ಮೃತರು.</p><p>ಸೇಡಂ ಕಡೆಯಿಂದ ಬೈಕ್ ಮೇಲೆ ಯುವಕರು ಎರಡು ಪ್ರತ್ಯೇಕ ಬೈಕ್ಗಳ ಮೇಲೆ ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ದಾರಿ ಮಧ್ಯೆ ಲಾರಿ ಹಾಗೂ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಚಿಂಚೋಳಿ ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್ಐ ಉಪೇಂದ್ರಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ( ಕಲಬುರಗಿ ಜಿಲ್ಲೆ):</strong> ಲಾರಿ ಮತ್ತು ಎರಡು ಬೈಕ್ ಗಳು ಮಧ್ಯೆ ಸಂಭವಿಸಿದ ಅಪಘತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಕೊಂಕನಳ್ಳಿ ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ. </p><p>ಸೇಡಂ ನಗರದ ಸಣ್ಣ ಅಗಸಿ ಬಡಾವಣೆಯ ನಿವಾಸಿಗಳು, ಸಹೋದರರಾದ ಸಂಜೀವಕುಮಾರ (21) ಹಾಗೂ ಕಾಶಿನಾಥ (19) ಮತ್ತು ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮದ ಮಹೇಶ ದೊಡ್ಡಪ್ಪ ಹಳ್ಳಿ(26) ಮೃತರು.</p><p>ಸೇಡಂ ಕಡೆಯಿಂದ ಬೈಕ್ ಮೇಲೆ ಯುವಕರು ಎರಡು ಪ್ರತ್ಯೇಕ ಬೈಕ್ಗಳ ಮೇಲೆ ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ದಾರಿ ಮಧ್ಯೆ ಲಾರಿ ಹಾಗೂ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಚಿಂಚೋಳಿ ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್ಐ ಉಪೇಂದ್ರಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>