<p><strong>ಸೇಡಂ</strong>: ಶಾಲಾ ಚಾವಣಿ ಪದರು ಕುಸಿದು ಗಾಯಗೊಂಡ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅಕ್ಷತಾ ಅವರ ಚಿಕಿತ್ಸೆ ಮುಂದುವರೆದಿದೆ.</p>.<p>ಯಾದಗಿರಿ ಜಿಲ್ಲಾ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಶುಕ್ರವಾರ ಮನೆಗೆ ಮರಳಿದ್ದರು. ಅಕ್ಷತಾ ತಲೆಗೆ ಪೆಟ್ಟಾದ ಸ್ಥಳದಲ್ಲಿ ರಕ್ತ ಹೆಪ್ಪು ಗಟ್ಟಿದಂತಾಗಿದೆ, ನೋವು ಹೆಚ್ಚಾಗುತ್ತಿದೆ ಎಂದು ಪಾಲಕರು ಶನಿವಾರ ಮುಖ್ಯಶಿಕ್ಷಕ ದೇವರಾಜ ಕೋರಿ ಗಮನಕ್ಕೆ ತಂದು ಕಲಬುರಗಿಯ ಟ್ರಾಮಾ ಕೇಂದ್ರಕ್ಕೆ ದಾಖಲಿಸಿದ್ದಾರೆ.</p>.<p>ಟ್ರಾಮಾ ಕೇಂದ್ರದಲ್ಲಿ ಚಿಕಿತ್ಸೆ ಕಾರ್ಯ ಮುಂದುವರೆದಿದೆ. ಗಾಯಗೊಂಡ ಸ್ಥಳದಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಆತಂಕ ಪಡುವ ಅವಶ್ಯಕತೆಯಿಲ್ಲ. ಚಿಕಿತ್ಸೆ ನೀಡಿದ್ದಲ್ಲಿ ಗುಣಮುಖವಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮುಖ್ಯಶಿಕ್ಷಕ ದೇವರಾಜ ಕೋರಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>ಶಿಕ್ಷಕನ ಕೈಯಿಂದಲೇ ಹಣ ಖರ್ಚು: ಗಾಯಗೊಂಡ ವಿದ್ಯಾರ್ಥಿಗಳಿಗೆ ಮುಖ್ಯಶಿಕ್ಷಕ ದೇವರಾಜ ಕೋರಿ ಚಿಕಿತ್ಸೆ ಖರ್ಚು ನೀಡುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ₹10ಸಾವಿರಕ್ಕೂ ಅಧಿಕ ಖರ್ಚಾಗಿದೆ ಎನ್ನಲಾಗಿದೆ. ಅಕ್ಷತಾ ಕುಟುಂಬವು ಬಿಪಿಎಲ್ ಪಡಿತರ ಚೀಟಿ ಹೊಂದಿರುವುದರಿಂದ ಕಲಬುರಗಿ ಟ್ರಾಮಾ ಸೆಂಟರ್ ನಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ</strong>: ಶಾಲಾ ಚಾವಣಿ ಪದರು ಕುಸಿದು ಗಾಯಗೊಂಡ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅಕ್ಷತಾ ಅವರ ಚಿಕಿತ್ಸೆ ಮುಂದುವರೆದಿದೆ.</p>.<p>ಯಾದಗಿರಿ ಜಿಲ್ಲಾ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಶುಕ್ರವಾರ ಮನೆಗೆ ಮರಳಿದ್ದರು. ಅಕ್ಷತಾ ತಲೆಗೆ ಪೆಟ್ಟಾದ ಸ್ಥಳದಲ್ಲಿ ರಕ್ತ ಹೆಪ್ಪು ಗಟ್ಟಿದಂತಾಗಿದೆ, ನೋವು ಹೆಚ್ಚಾಗುತ್ತಿದೆ ಎಂದು ಪಾಲಕರು ಶನಿವಾರ ಮುಖ್ಯಶಿಕ್ಷಕ ದೇವರಾಜ ಕೋರಿ ಗಮನಕ್ಕೆ ತಂದು ಕಲಬುರಗಿಯ ಟ್ರಾಮಾ ಕೇಂದ್ರಕ್ಕೆ ದಾಖಲಿಸಿದ್ದಾರೆ.</p>.<p>ಟ್ರಾಮಾ ಕೇಂದ್ರದಲ್ಲಿ ಚಿಕಿತ್ಸೆ ಕಾರ್ಯ ಮುಂದುವರೆದಿದೆ. ಗಾಯಗೊಂಡ ಸ್ಥಳದಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಆತಂಕ ಪಡುವ ಅವಶ್ಯಕತೆಯಿಲ್ಲ. ಚಿಕಿತ್ಸೆ ನೀಡಿದ್ದಲ್ಲಿ ಗುಣಮುಖವಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮುಖ್ಯಶಿಕ್ಷಕ ದೇವರಾಜ ಕೋರಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>ಶಿಕ್ಷಕನ ಕೈಯಿಂದಲೇ ಹಣ ಖರ್ಚು: ಗಾಯಗೊಂಡ ವಿದ್ಯಾರ್ಥಿಗಳಿಗೆ ಮುಖ್ಯಶಿಕ್ಷಕ ದೇವರಾಜ ಕೋರಿ ಚಿಕಿತ್ಸೆ ಖರ್ಚು ನೀಡುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ₹10ಸಾವಿರಕ್ಕೂ ಅಧಿಕ ಖರ್ಚಾಗಿದೆ ಎನ್ನಲಾಗಿದೆ. ಅಕ್ಷತಾ ಕುಟುಂಬವು ಬಿಪಿಎಲ್ ಪಡಿತರ ಚೀಟಿ ಹೊಂದಿರುವುದರಿಂದ ಕಲಬುರಗಿ ಟ್ರಾಮಾ ಸೆಂಟರ್ ನಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>