ಕಲಬುರ್ಗಿ: ಇಲ್ಲಿನ ಕಲಬುರ್ಗಿ-ಯಾದಗಿರಿ ಕೇಂದ್ರ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಸೇಡಂ ಶಾಸಕ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜಕುಮಾರ ಪಾಟೀಲ ತೆಲ್ಕೂರ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುರೇಶ ಸಜ್ಜನ ಆಯ್ಕೆಯಾದರು.
ಇಬ್ಬರಿಗೂ ತಲಾ 9 ಮತಗಳು ಬಂದವು. ಕಾಂಗ್ರೆಸ್ ಬೆಂಬಲಿತ ಮೂವರು ಅನರ್ಹರಾಗಿದ್ದರು. ಹಾಗಾಗಿ ಅವರಿಗೆ ಮತಾಧಿಕಾರ ಸಿಗಲಿಲ್ಲ. ಆಡಳಿತಾಧಿಕಾರಿಯಾಗಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ ತೆಲ್ಕೂರ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.