ಕಲಬುರಗಿ: ‘ಪಕ್ಷದಲ್ಲಿ ನಾನು ಹಿರಿಯನಾಗಿದ್ದು, ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷನಾಗಿ, ಒಂದು ಬಾರಿ ತಾಲ್ಲೂಕು ಅಧ್ಯಕ್ಷನಾಗಿ, ಪ್ರಸ್ತುತ ವಿಭಾಗೀಯ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಹಾಗಾಗಿ, ಪಕ್ಷದಲ್ಲಿನ ನನ್ನ ಹಿರಿತನ ಹಾಗೂ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನಕ್ಕೆ ಪರಿಗಣಿಸಬೇಕು’ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆದ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಮನವಿ ಮಾಡಿದ್ದಾರೆ.