<p>ಸೇಡಂ: ಸೇಡಂನ ಜನರ ಬೇಡಿಕೆ ಮೇರೆಗೆ ಅಂಬ್ಯಲೆನ್ಸ್ ಸೇವೆ ಪುನಾರಂಭಿಸಲು ನಿರ್ಧರಿಸಲಾಗಿದೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ ಕುಮಾರಸ್ವಾಮಿ ಏ.30 ರಂದು ಚಾಲನೆ ನೀಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.</p>.<p>ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಏ.30ರಂದು ಸಂಜೆ 4.30ಕ್ಕೆ ವಿವಿಧ ಕಾರ್ಯಕ್ರಮಗಳ ಚಾಲನಾ ಸಮಾರಂಭ ಆಯೋಜಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಅಂಬುಲೆನ್ಸ್ ಸೇವೆ ನೀಡಲಾಗಿತ್ತು. ಈಗ ಸಕಾಲಕ್ಕೆ ಜನರಿಗೆ ಅಂಬುಲೆನ್ಸ್ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದೆ. ಜೊತೆಗೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಜನರ ಆರೋಗ್ಯ ಕಾಳಜಿಯ ದೃಷ್ಟಿಯಿಂದ ಅಂಬುಲೆನ್ಸ್ ಸೇವೆಗೆ ಚಾಲನೆ ನೀಡಲಾಗುತ್ತಿದೆ’.</p>.<p>‘ಕ್ಷೇತ್ರದಲ್ಲಿ ಸಾಕಷ್ಟು ಸಿಮೆಂಟ್ ಕಂಪೆನಿಗಳಿದ್ದರೂ ಸಹ ಯುವ ಜನತೆ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಸುತ್ತಲಿನ ಪ್ರದೇಶಗಳ ಕಂಪನಿಗಳಲ್ಲಿ ಯುವಕರಿಗೆ ಕೌಶಲ ಹಾಗೂ ತರಬೇತಿ ನೀಡಿ, ಕಾಯಂ ಉದ್ಯೋಗ ಕೊಡಿಸುವ ಯೋಜನೆ ರೂಪಿಸಲಾಗಿದೆ. ಪ್ರತಿ ಪಂಚಾಯಿತಿ ಮತ್ತು ಮನೆ-ಮನೆಗೆ ಉದ್ಯೋಗ ಸಂಚಾರವು ನಡೆಯಲಿದೆ’ ಎಂದು ತಿಳಿಸಿದ್ದಾರೆ.</p>.<p>ಜನತಾಳದ ಬೆಳ್ಳಿ ಮಹೋತ್ಸವ ಸಂಭ್ರಮ, ಕ್ಷೇತ್ರದ ಜನರೊಂದಿಗೆ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಜೆಡಿಎಸ್ ಪಕ್ಷದ ಡಿಜಿಟಲ್ ಅಭಿಯಾನವೂ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-31-1494656529</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೇಡಂ: ಸೇಡಂನ ಜನರ ಬೇಡಿಕೆ ಮೇರೆಗೆ ಅಂಬ್ಯಲೆನ್ಸ್ ಸೇವೆ ಪುನಾರಂಭಿಸಲು ನಿರ್ಧರಿಸಲಾಗಿದೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ ಕುಮಾರಸ್ವಾಮಿ ಏ.30 ರಂದು ಚಾಲನೆ ನೀಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.</p>.<p>ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಏ.30ರಂದು ಸಂಜೆ 4.30ಕ್ಕೆ ವಿವಿಧ ಕಾರ್ಯಕ್ರಮಗಳ ಚಾಲನಾ ಸಮಾರಂಭ ಆಯೋಜಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಅಂಬುಲೆನ್ಸ್ ಸೇವೆ ನೀಡಲಾಗಿತ್ತು. ಈಗ ಸಕಾಲಕ್ಕೆ ಜನರಿಗೆ ಅಂಬುಲೆನ್ಸ್ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದೆ. ಜೊತೆಗೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಜನರ ಆರೋಗ್ಯ ಕಾಳಜಿಯ ದೃಷ್ಟಿಯಿಂದ ಅಂಬುಲೆನ್ಸ್ ಸೇವೆಗೆ ಚಾಲನೆ ನೀಡಲಾಗುತ್ತಿದೆ’.</p>.<p>‘ಕ್ಷೇತ್ರದಲ್ಲಿ ಸಾಕಷ್ಟು ಸಿಮೆಂಟ್ ಕಂಪೆನಿಗಳಿದ್ದರೂ ಸಹ ಯುವ ಜನತೆ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಸುತ್ತಲಿನ ಪ್ರದೇಶಗಳ ಕಂಪನಿಗಳಲ್ಲಿ ಯುವಕರಿಗೆ ಕೌಶಲ ಹಾಗೂ ತರಬೇತಿ ನೀಡಿ, ಕಾಯಂ ಉದ್ಯೋಗ ಕೊಡಿಸುವ ಯೋಜನೆ ರೂಪಿಸಲಾಗಿದೆ. ಪ್ರತಿ ಪಂಚಾಯಿತಿ ಮತ್ತು ಮನೆ-ಮನೆಗೆ ಉದ್ಯೋಗ ಸಂಚಾರವು ನಡೆಯಲಿದೆ’ ಎಂದು ತಿಳಿಸಿದ್ದಾರೆ.</p>.<p>ಜನತಾಳದ ಬೆಳ್ಳಿ ಮಹೋತ್ಸವ ಸಂಭ್ರಮ, ಕ್ಷೇತ್ರದ ಜನರೊಂದಿಗೆ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಜೆಡಿಎಸ್ ಪಕ್ಷದ ಡಿಜಿಟಲ್ ಅಭಿಯಾನವೂ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-31-1494656529</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>