<p><strong>ಸೇಡಂ</strong>: ಕ್ಷುಲ್ಲಕ ಕಾರಣಕ್ಕೆ ಆರಂಭಗೊಂಡ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲ್ಲೂಕಿನ ಕೋಡ್ಲಾ–ಬೆನಕನಹಳ್ಳಿ ಗ್ರಾಮದ ಶ್ರೀ ಸಿಮೆಂಟ್ ಕಂಪನಿಯ ಕಾಲೊನಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.</p>.<p>ಕಂಪನಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮಧ್ಯೆ ಅಡುಗೆ ವಿಷಯಕ್ಕೆ ಸಂಬಂಧಿಸಿದಂತೆ ನಿತ್ಯ ಜಗಳವಾಗುತ್ತಿತ್ತು. ಭಾನುವಾರ ರಾತ್ರಿ ಜಗಳ ತಾರಕ್ಕೇರಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಛತ್ತೀಸಗಡ ರಾಜ್ಯದ ಗೋಪಾಲ ಪಟೇಲ್ (31), ಗೋಪಾಲ ವರ್ಮಾ (29) ಮೃತ ಕಾರ್ಮಿಕರು. ವಿಜಯ ನಶಾದ ಎಂಬ ಕಾರ್ಮಿಕ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.</p>.<p>ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್ಐ ಉಪೇಂದ್ರ, ಶರಣಪ್ಪ ಜಾಕನಳ್ಳಿ, ಕಾನ್ಸ್ಟೆಬಲ್ಗಳಾದ ಬಾಲಕೃಷ್ಣ ರೆಡ್ಡಿ, ರವಿಕುಮಾರ್, ನಾಗರಾಜ, ಹೊನ್ನಪ್ಪ, ಮಾಣಿಕಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ</strong>: ಕ್ಷುಲ್ಲಕ ಕಾರಣಕ್ಕೆ ಆರಂಭಗೊಂಡ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲ್ಲೂಕಿನ ಕೋಡ್ಲಾ–ಬೆನಕನಹಳ್ಳಿ ಗ್ರಾಮದ ಶ್ರೀ ಸಿಮೆಂಟ್ ಕಂಪನಿಯ ಕಾಲೊನಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.</p>.<p>ಕಂಪನಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮಧ್ಯೆ ಅಡುಗೆ ವಿಷಯಕ್ಕೆ ಸಂಬಂಧಿಸಿದಂತೆ ನಿತ್ಯ ಜಗಳವಾಗುತ್ತಿತ್ತು. ಭಾನುವಾರ ರಾತ್ರಿ ಜಗಳ ತಾರಕ್ಕೇರಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಛತ್ತೀಸಗಡ ರಾಜ್ಯದ ಗೋಪಾಲ ಪಟೇಲ್ (31), ಗೋಪಾಲ ವರ್ಮಾ (29) ಮೃತ ಕಾರ್ಮಿಕರು. ವಿಜಯ ನಶಾದ ಎಂಬ ಕಾರ್ಮಿಕ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.</p>.<p>ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್ಐ ಉಪೇಂದ್ರ, ಶರಣಪ್ಪ ಜಾಕನಳ್ಳಿ, ಕಾನ್ಸ್ಟೆಬಲ್ಗಳಾದ ಬಾಲಕೃಷ್ಣ ರೆಡ್ಡಿ, ರವಿಕುಮಾರ್, ನಾಗರಾಜ, ಹೊನ್ನಪ್ಪ, ಮಾಣಿಕಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>