<p><strong>ಅಫಜಲಪುರ(ಕಲಬುರಗಿ ಜಿಲ್ಲೆ):</strong> ಗಾಳಿಯಲ್ಲಿ ಗುಂಡು ಹಾರಿಸಿದ್ದ ತಾಲ್ಲೂಕಿನ ಉಡಚಾಣ ಗ್ರಾಮದ ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಪೀಠಾಧಿಪತಿ ಶಾಂತಲಿಂಗ ಶಿವಾಚಾರ್ಯ ಅವರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.</p><p>ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ ಅವರನ್ನು ಬಂಧಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಬಳಿಕ ಆವರಣದಲ್ಲಿ ಪಿಎಸ್ಐ ಸೋಮಲಿಂಗ ಒಡೆಯರ್ ಅವರ ನೇತೃತ್ವದ ತಂಡ ಸ್ವಾಮೀಜಿಯನ್ನು ಬಂಧಿಸಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ.</p><p>ಗ್ರಾಮದಲ್ಲಿನ ಇನ್ನೊಂದು ಗುಂಪು ಅವರನ್ನು ಬಿಡಿಸಿಕೊಂಡು ಹೋಗಲು ಮಂಗಳವಾರ ಬೆಳಿಗ್ಗೆಯಿಂದ ಪಟ್ಟಣದಲ್ಲಿ ಠಿಕಾಣಿ ಹೂಡಿದೆ.</p><p>ಈ ಹಿಂದೆ ಸ್ವಾಮೀಜಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಪಾನಮತ್ತರಾಗಿ ಅರೆಬರೆ ಬಟ್ಟೆ ಕಳಚಿಕೊಂಡು ಮಲಗಿಕೊಂಡಿದ್ದರು. ಇದೀಗ ಮತ್ತೆ ಮಠದಲ್ಲಿ ಇದ್ದುಕೊಂಡು ಭಾನುವಾರ ರಾತ್ರಿ ಗಾಳಿಯಲ್ಲಿ ಗುಂಡು ಹಾರಿಸಿ ಸುದ್ದಿಯಲ್ಲಿದ್ದಾರೆ.</p><p>ಮಠದ ವಿಚಾರವಾಗಿ ಗ್ರಾಮದಲ್ಲಿ ಎರಡು ಪಂಗಡಗಳಿದ್ದು, ಒಂದು ಗುಂಪು ಸ್ವಾಮೀಜಿ ಅವರನ್ನು ಮಠದಲ್ಲಿ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದರೆ, ಇನ್ನೊಂದು ಗುಂಪು ಅವರನ್ನು ಮಠ ಬಿಟ್ಟು ಹೊರಗೆ ಕಳಿಸಲು ಪ್ರಯತ್ನ ಮಾಡುತ್ತಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ(ಕಲಬುರಗಿ ಜಿಲ್ಲೆ):</strong> ಗಾಳಿಯಲ್ಲಿ ಗುಂಡು ಹಾರಿಸಿದ್ದ ತಾಲ್ಲೂಕಿನ ಉಡಚಾಣ ಗ್ರಾಮದ ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಪೀಠಾಧಿಪತಿ ಶಾಂತಲಿಂಗ ಶಿವಾಚಾರ್ಯ ಅವರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.</p><p>ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ ಅವರನ್ನು ಬಂಧಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಬಳಿಕ ಆವರಣದಲ್ಲಿ ಪಿಎಸ್ಐ ಸೋಮಲಿಂಗ ಒಡೆಯರ್ ಅವರ ನೇತೃತ್ವದ ತಂಡ ಸ್ವಾಮೀಜಿಯನ್ನು ಬಂಧಿಸಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ.</p><p>ಗ್ರಾಮದಲ್ಲಿನ ಇನ್ನೊಂದು ಗುಂಪು ಅವರನ್ನು ಬಿಡಿಸಿಕೊಂಡು ಹೋಗಲು ಮಂಗಳವಾರ ಬೆಳಿಗ್ಗೆಯಿಂದ ಪಟ್ಟಣದಲ್ಲಿ ಠಿಕಾಣಿ ಹೂಡಿದೆ.</p><p>ಈ ಹಿಂದೆ ಸ್ವಾಮೀಜಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಪಾನಮತ್ತರಾಗಿ ಅರೆಬರೆ ಬಟ್ಟೆ ಕಳಚಿಕೊಂಡು ಮಲಗಿಕೊಂಡಿದ್ದರು. ಇದೀಗ ಮತ್ತೆ ಮಠದಲ್ಲಿ ಇದ್ದುಕೊಂಡು ಭಾನುವಾರ ರಾತ್ರಿ ಗಾಳಿಯಲ್ಲಿ ಗುಂಡು ಹಾರಿಸಿ ಸುದ್ದಿಯಲ್ಲಿದ್ದಾರೆ.</p><p>ಮಠದ ವಿಚಾರವಾಗಿ ಗ್ರಾಮದಲ್ಲಿ ಎರಡು ಪಂಗಡಗಳಿದ್ದು, ಒಂದು ಗುಂಪು ಸ್ವಾಮೀಜಿ ಅವರನ್ನು ಮಠದಲ್ಲಿ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದರೆ, ಇನ್ನೊಂದು ಗುಂಪು ಅವರನ್ನು ಮಠ ಬಿಟ್ಟು ಹೊರಗೆ ಕಳಿಸಲು ಪ್ರಯತ್ನ ಮಾಡುತ್ತಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>