ಈ ಸಂದರ್ಭದಲ್ಲಿ ಮಾತನಾಡಿದ ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಶಿವರಾವ ಮಾಲಿಪಾಟೀಲ ಅವರು ಸುಮಾರು 19 ವರ್ಷಗಳಿಂದ ಕಲ್ಯಾಣ ಕರ್ನಾಟಕ ಭಾಗದ ಅತಿ ಹೆಚ್ಚಿನ ಸುಮಾರು 2500 ವಿದ್ಯಾರ್ಥಿನಿಯರು ಇರುವ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. 1988ರಿಂದ 2003ರವರೆಗೆ ಸತತ ಹೋರಾಟ ನಡೆಸಿದ್ದರಿಂದ ಅರೆಕಾಲಿಕ ಉಪನ್ಯಾಸಕರು ಕಾಯಂ ಆದರು. ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲೆಯ ಪ್ರತಿನಿಧಿಯಾಗಿ, ರಾಜ್ಯ ಉಪನ್ಯಾಸಕರ ಸಂಘದ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ’ ಎಂದರು. ಕರ್ನಾಟಕ ರಾಜ್ಯ ಪದವಿಪೂರ್ವ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ, ಅಧ್ಯಕ್ಷ ನಿಂಗೇಗೌಡ ಹಾಗೂ ಜಿಲ್ಲೆಯ ಉಪನ್ಯಾಸಕರ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಕುಟುಂಬ ಸದಸ್ಯರು ಇದ್ದರು.