<p><strong>ಕಲಬುರಗಿ: </strong>ನಗರದ ಹಿರಿಯ ವಕೀಲ ಉಸ್ತಾದ ಸಾದತ್ ಹುಸೇನ್ (77) ಭಾನುವಾರ ನಿಧನರಾದರು.</p>.<p>ಅವರಿಗೆ ಪತ್ನಿ, ವಕೀಲ ಉಸ್ತಾದ್ ಝಾಕೀರ್ ಹುಸೇನ್, ಜೆಡಿಎಸ್ ಅಲ್ಪ ಸಂಖ್ಯಾತ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಉಸ್ತಾದ ನಾಸೀರ್ ಹುಸೇನ್, ವೈದ್ಯ ಡಾ. ಉಸ್ತಾದ ತನವೀರ್ ಹುಸೇನ್ ಸೇರಿ ಐವರು ಪುತ್ರರು ಮತ್ತು ಪುತ್ರಿ ಇದ್ದಾರೆ.</p>.<p>ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 1 ಗಂಟೆಗೆ ನೆರವೇರಿಸಲಾ ಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.</p>.<p>ಸಾದತ್ ಹುಸೇನ್ ಅವರು 1978ರಲ್ಲಿ ಜನತಾ ಪಕ್ಷದಿಂದ, 1982 ಮತ್ತು 1994ರಲ್ಲಿ ಕಾಂಗ್ರೆಸ್ನಿಂದ ಕಲಬುರಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. 1992ರಲ್ಲಿ ಕಲಬುರಗಿ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದರು. ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷರೂ ಆಗಿದ್ದರು.</p>.<p>50ಕ್ಕೂ ಹೆಚ್ಚು ವರ್ಷಗಳಿಂದ ವಕೀಲಿ ವೃತ್ತಿ ನಡೆಸಿದ್ದರು. ಅವರ ಬಳಿ 700ಕ್ಕೂ ಅಧಿಕ ವಕೀಲರು ತರಬೇತಿ ಪಡೆದಿದ್ದಾರೆ. ಕಲಬುರಗಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಲು ಅವರ ನೇತೃತ್ವದಲ್ಲೆ ಹೋರಾಟ ನಡೆ ದಿತ್ತು. ಅವರು ವಕೀಲರ ಸಂಘದ ಅಧ್ಯಕ್ಷರೂ ಆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>ನಗರದ ಹಿರಿಯ ವಕೀಲ ಉಸ್ತಾದ ಸಾದತ್ ಹುಸೇನ್ (77) ಭಾನುವಾರ ನಿಧನರಾದರು.</p>.<p>ಅವರಿಗೆ ಪತ್ನಿ, ವಕೀಲ ಉಸ್ತಾದ್ ಝಾಕೀರ್ ಹುಸೇನ್, ಜೆಡಿಎಸ್ ಅಲ್ಪ ಸಂಖ್ಯಾತ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಉಸ್ತಾದ ನಾಸೀರ್ ಹುಸೇನ್, ವೈದ್ಯ ಡಾ. ಉಸ್ತಾದ ತನವೀರ್ ಹುಸೇನ್ ಸೇರಿ ಐವರು ಪುತ್ರರು ಮತ್ತು ಪುತ್ರಿ ಇದ್ದಾರೆ.</p>.<p>ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 1 ಗಂಟೆಗೆ ನೆರವೇರಿಸಲಾ ಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.</p>.<p>ಸಾದತ್ ಹುಸೇನ್ ಅವರು 1978ರಲ್ಲಿ ಜನತಾ ಪಕ್ಷದಿಂದ, 1982 ಮತ್ತು 1994ರಲ್ಲಿ ಕಾಂಗ್ರೆಸ್ನಿಂದ ಕಲಬುರಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. 1992ರಲ್ಲಿ ಕಲಬುರಗಿ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದರು. ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷರೂ ಆಗಿದ್ದರು.</p>.<p>50ಕ್ಕೂ ಹೆಚ್ಚು ವರ್ಷಗಳಿಂದ ವಕೀಲಿ ವೃತ್ತಿ ನಡೆಸಿದ್ದರು. ಅವರ ಬಳಿ 700ಕ್ಕೂ ಅಧಿಕ ವಕೀಲರು ತರಬೇತಿ ಪಡೆದಿದ್ದಾರೆ. ಕಲಬುರಗಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಲು ಅವರ ನೇತೃತ್ವದಲ್ಲೆ ಹೋರಾಟ ನಡೆ ದಿತ್ತು. ಅವರು ವಕೀಲರ ಸಂಘದ ಅಧ್ಯಕ್ಷರೂ ಆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>