‘ಕಲ್ಯಾಣ ಕರ್ನಾಟಕದ ಕಲಬುರ್ಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳು ಹಿಂದುಳಿದಿದ್ದು, ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆ ಎದುರಿಸುತ್ತಿವೆ. 371 (ಜೆ) ವಿಶೇಷ ಸ್ಥಾನಮಾನ ಸಿಕ್ಕರೂ ಪೂರ್ಣಪ್ರಮಾಣದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯವಾಗುತ್ತಿಲ್ಲ. ಈ ಕಾರಣ ಈ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಮತ್ತು ಉದ್ಯಮ ಅಭಿವೃದ್ಧಿಪಡಿಸಲು ಆದ್ಯತೆ ನೀಡಬೇಕು’ ಎಂದು ಮಂಡಳಿಯ ಅಧ್ಯಕ್ಷ ಅಮರನಾಥ ಸಿ.ಪಾಟೀಲ ಮತ್ತು ಗೌರವ ಕಾರ್ಯದರ್ಶಿ ಶಶಿಕಾಂತ ಬಿ. ಪಾಟೀಲ ಮನವಿ ಮಾಡಿದ್ದಾರೆ.