<p><strong>ಶಹಾಬಾದ್: </strong>‘ಸೇವಾಲಾಲ್ ಮಹಾರಾಜರು ಅವರ ಸಿದ್ಧಾಂತಗಳು, ಸಮಾಜ ಸುಧಾರಣೆಯ ಕೊಡುಗೆಗಳ ಮೂಲಕ ಜೀವಂತವಾಗಿ ಇದ್ದಾರೆ’ ಎಂದು ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.</p>.<p>ನಗರಸಭೆಯಲ್ಲಿ ಸೋಮವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸೇವಾಲಾಲ್ ಮಹಾರಾಜರು ಬಂಜಾರಾ ಸಮಾಜದ ಏಳಿಗೆಗೆ ಶ್ರಮಪಟ್ಟ ಗುರುಗಳು. ಅವರ ಆದರ್ಶದ ತಳಹದಿಯಲ್ಲೇ ಬಂಜಾರಾ ಸಮಾಜ ಸಂಘಟಿತವಾಗಬೇಕು. ತಮ್ಮ ಹಕ್ಕುಗಳಿಗಾಗಿ ಹೋರಾಡಬೇಕು. ಬಂಜಾರಾ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಅಭಿವೃದ್ಧಿಗೊಳ್ಳಬೇಕಾಗಿದೆ. ಆದ್ದರಿಂದ ಮಕ್ಕಳಿಗೆ ಸರಿಯಾದ ಶಿಕ್ಷಣ ಒದಗಿಸುವ ಅಗತ್ಯವಿದೆ’ ಎಂದರು.</p>.<p>ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ಮಾತನಾಡಿ, ‘ದೇಶದಲ್ಲಿ ಅಪಾರ ಜನಸಂಖ್ಯೆ ಹೊಂದಿದ ಬಂಜಾರಾ ಸಮಾಜ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸದೃಢರಾಗಬೇಕು’ ಎಂದರು.</p>.<p>ನಗರಸಭೆಯ ಉಪಾಧ್ಯಕ್ಷೆ ಸಲೀಮಾ ಬೇಗಂ, ಸದಸ್ಯರಾದ ರವಿ ರಾಠೋಡ, ಸಾಬೇರಾ ಬೇಗಂ, ಪಾರ್ವತಿ ಪವಾರ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕುಮಾರ ಚವ್ಹಾಣ, ಶರಣು ಪಗಲಾಪೂರ್, ಡಾ.ರಶೀದ್ ಮರ್ಚಂಟ್, ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಬಾದ್: </strong>‘ಸೇವಾಲಾಲ್ ಮಹಾರಾಜರು ಅವರ ಸಿದ್ಧಾಂತಗಳು, ಸಮಾಜ ಸುಧಾರಣೆಯ ಕೊಡುಗೆಗಳ ಮೂಲಕ ಜೀವಂತವಾಗಿ ಇದ್ದಾರೆ’ ಎಂದು ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.</p>.<p>ನಗರಸಭೆಯಲ್ಲಿ ಸೋಮವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸೇವಾಲಾಲ್ ಮಹಾರಾಜರು ಬಂಜಾರಾ ಸಮಾಜದ ಏಳಿಗೆಗೆ ಶ್ರಮಪಟ್ಟ ಗುರುಗಳು. ಅವರ ಆದರ್ಶದ ತಳಹದಿಯಲ್ಲೇ ಬಂಜಾರಾ ಸಮಾಜ ಸಂಘಟಿತವಾಗಬೇಕು. ತಮ್ಮ ಹಕ್ಕುಗಳಿಗಾಗಿ ಹೋರಾಡಬೇಕು. ಬಂಜಾರಾ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಅಭಿವೃದ್ಧಿಗೊಳ್ಳಬೇಕಾಗಿದೆ. ಆದ್ದರಿಂದ ಮಕ್ಕಳಿಗೆ ಸರಿಯಾದ ಶಿಕ್ಷಣ ಒದಗಿಸುವ ಅಗತ್ಯವಿದೆ’ ಎಂದರು.</p>.<p>ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ಮಾತನಾಡಿ, ‘ದೇಶದಲ್ಲಿ ಅಪಾರ ಜನಸಂಖ್ಯೆ ಹೊಂದಿದ ಬಂಜಾರಾ ಸಮಾಜ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸದೃಢರಾಗಬೇಕು’ ಎಂದರು.</p>.<p>ನಗರಸಭೆಯ ಉಪಾಧ್ಯಕ್ಷೆ ಸಲೀಮಾ ಬೇಗಂ, ಸದಸ್ಯರಾದ ರವಿ ರಾಠೋಡ, ಸಾಬೇರಾ ಬೇಗಂ, ಪಾರ್ವತಿ ಪವಾರ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕುಮಾರ ಚವ್ಹಾಣ, ಶರಣು ಪಗಲಾಪೂರ್, ಡಾ.ರಶೀದ್ ಮರ್ಚಂಟ್, ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>